ಬೆಂಗಳೂರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಂತಹ ಉನ್ನತ ನಾಯಕರನ್ನು ಒಳಗೊಂಡ 22 ಸದಸ್ಯರ ಉನ್ನತ ಮಟ್ಟದ ಸಮಿತಿಯು ಬುಧವಾರ ತನ್ನ ಎರಡು ದಿನಗಳ ಸಭೆಯನ್ನು ಮುಕ್ತಾಯಗೊಳಿಸಿದ್ದು, 124 ಕ್ಷೇತ್ರಗಳಿಗೆ ತಲಾ 2-3 ಹೆಸರನ್ನು ಅಂತಿಮಗೊಳಿಸಿದೆ.ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮಾಡುವ ವಿಚಾರದಲ್ಲಿ ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ನಡುವೆ ಭಾರೀ ಪೈಪೋಟಿ ನಡೆದಿದೆ. ಹೀಗಾಗಿ ಟಿಕೆಟ್ ಹಂಚಿಕೆ ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಕನಿಷ್ಠ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸವಾಲಾಗಿರುವುದರಿಂದ ಬಿಜೆಪಿ ತನ್ನ ಅಭ್ಯರ್ಥಿಗಳ ಘೋಷಣೆಗೆ ತಡ ಮಾಡುತ್ತಿದ್ದು, ಟಿಕೆಟ್ ಹಂಚಿಕೆ ಪ್ರಕ್ರಿಯೆಯು ಏಪ್ರಿಲ್ 20ರವರೆಗೆ ಎಳೆಯುವ ಸಾಧ್ಯತೆಯಿದೆ. ಇದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಇದು ಬಿಜೆಪಿ ಆಕಾಂಕ್ಷಿಗಳಲ್ಲಿ ಆತಂಕ ಹೆಚ್ಚಿಸಿದೆ.
ಬೆಳಗಾವಿ ಉತ್ತರ, ದಕ್ಷಿಣ ಖಾನಾಪೂರ ಬೈಲಹೊಂಗಲ, ಅಥಣಿ, ಸವದತ್ತಿ, ಹುಕ್ಕೇರಿ, ರಾಯಬಾಗ ಕುಂದಗೋಳ ಗುಬ್ಬಿ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಮಾತ್ರವಲ್ಲದೆ ಆಯ್ಕೆಯಾಗದವರಿಂದ ಬಂಡಾಯದ ಭೀತಿ ಎದುರಾಗಿದೆ.
ಖಾನಾಪೂರ ಕ್ಷೇತ್ರದಲ್ಲಿ ವಿಠ್ಠಲ ಹಲಗೇಕರ, ಅರವಿಂದ ಪಾಟೀಲ ನಡುವೆ ಟಿಕೆಟ್ ಗಾಗಿ ತೀವ್ರ ನಡೆದಿದ್ದು, ಈ ನಡುವೆ ಕುಮಟಹಳ್ಳಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಹಾಲಿ ಮಹೇಶ್ ನಡುವಿನ ಭಿನ್ನಾಭಿಪ್ರಾಯದಿಂದ ಅಭ್ಯರ್ಥಿ ಘೋಷಣೆ ತಡವಾಗಬಹುದು. ಜೊತೆಗೆ ಅಲ್ಲಿ ಪ್ರಕ್ರಿಯೆ ವಿಳಂಬವಾಗಬಹುದು ಎಂದು ಮೂಲಗಳು ಹೇಳಿವೆ.
ಖಾನಾಪೂರ ಅಥಣಿಯಂತಹ ಕೆಲವು ಸ್ಥಾನಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಹಾಲಿ ಶಾಸಕರು ಟಿಕೆಟ್ ಪಡೆಯುವ ಸಾಧ್ಯತೆಯಿದೆ. ಅಲ್ಲಿ ಶಾಸಕರು ಪಕ್ಷದ ಇನ್ನೊಬ್ಬ ಹಿರಿಯ ನಾಯಕರಿಂದ ತೀವ್ರ ಪೈಪೋಟಿ ಎದುರಿಸುತ್ತಿದ್ದಾರೆ.
ಕೇಂದ್ರ ನಾಯಕತ್ವದ ನಿರ್ದೇಶನಕ್ಕೆ ಅನುಗುಣವಾಗಿ, ರಾಜ್ಯ ಬಿಜೆಪಿ ಘಟಕ ತನ್ನದೇ ಆದ ಶಾಸಕರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಕನಿಷ್ಠ ಇಬ್ಬರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.
ಹಾಲಿ ಶಾಸಕರು ಕ್ಷೇತ್ರವನ್ನು ಬದಲಾಯಿಸಲು ಆಯ್ಕೆ ಮಾಡಿದರೆ, ಕೊನೆಯ ಕ್ಷಣದಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪಕ್ಷದಲ್ಲಿ ಪರ್ಯಾಯ ಹೆಸರು ಲಭ್ಯವಿರಬೇಕು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ನಿವೃತ್ತಿ ಘೋಷಿಸಿರುವ ಅಭ್ಯರ್ಥಿಗಳ ಆಯ್ಕೆಗೆ ಪಕ್ಷವು ಸ್ವಲ್ಪ ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ. ಹಾವೇರಿ, ಚನ್ನಗಿರಿ ಮತ್ತು ಮೂಡಿಗೆರೆ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಾಗಿದೆ. ಈ ಕ್ಷೇತ್ರಗಳಿಂದ ಹೆಚ್ಚಿನ ಸಂಖ್ಯೆಯ ಹೊಸ ಆಕಾಂಕ್ಷಿಗಳು ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಈ ಕ್ಷೇತ್ರಗಳಲ್ಲೂ ಘೋಷಣೆ ವಿಳಂಬವಾಗವ ಸಾಧ್ಯತೆ ಇದೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.