ರಾಜ್ಯ

ಮೋದಿ ಸ್ವಾಗತಕ್ಕೆ ನವವಧುವಿನಂತೆ ಸಜ್ಜಾದ ಮೈಸೂರು 

ಮೈಸೂರು: ಪ್ರಧಾನಿ ನರೇಂದ್ರ  ಮೋದಿ ಮೈಸೂರು ಭೇಟಿಗೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ರಾತ್ರಿ 8.30ಕ್ಕೆ ಮೋದಿ ಮೈಸೂರಿಗೆ ಅಗಮಿಸುತ್ತಿದ್ದು, ಪ್ರಧಾನಿ ನಮೋ ಸ್ವಾಗತಿಸಲು ಎಲ್ಲರೂ ಸಜ್ಜಾಗಿದ್ದಾರೆ. ಪ್ರಧಾನಿ ನರೇಂದ್ರಮೋದಿ ಇಂದಿನಿಂದ ಎರಡು ದಿನಗಳ ಕಾಲ ಮೈಸೂರು-ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿರುವ ಹಿನ್ನೆಲೆ ಇದಕ್ಕಾಗಿ ಮೈಸೂರು, ಚಾಮರಾಜನಗರದಲ್ಲಿ ಭರದ ಸಿದ್ದತೆ ನಡೆದಿದೆ.ದೆಹಲಿಯಿಂದ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ,ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ಮುಂಜಾನೆ ವಿಶೇಷ ಹೆಲಿಕಾಪ್ಟರ್ ಮೂಲಕ ಪಿಎಂ ಮೋದಿ ಬಂಡೀಪುರಕ್ಕೆ ಪಯಣ ಬೆಳಸಲಿದ್ದಾರೆ.
ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ 
ಪ್ರಧಾನಿ ಹೋಗಿ ಬರಲು ಮೈಸೂರಿನಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ.ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಎದುರಿನ ಓವೆಲ್ ಮೈದಾನದಲ್ಲಿ ಸಕಲ ಸಿದ್ದತೆ ನಡೆಸಲಾಗಿದೆ.ಹೆಲಿಕಾಪ್ಟರ್ ಇಳಿಯುವಾಗ ಧೂಳು ಏಳದಂತೆ ಟ್ಯಾಂಕರ್ ಮೂಲಕ ನೀರು ಸಿಂಪಡಣೆ ಮಾಡಲಾಯ್ತು.ಭದ್ರತಾ ಸಿಬ್ಬಂದಿಗಳಿಂದ ವ್ಯಾಪಕ ತಪಾಸಣೆ ನಡೆಸಲಾಯ್ತು.ಸ್ಪೋಟಕ ಪತ್ತೆ ದಳ ಹಾಗು ಶ್ವಾನದಳದ ಸಿಬ್ಬಂದಿಗಳಿಂದ ತೀವ್ರ ತಪಾಸಣೆ ನಡೆಸಲಾಯ್ತು.
ಸಫಾರಿಯಲ್ಲಿ ಭಾಗಿಯಾಗಲಿದ್ದಾರೆ ಪ್ರಧಾನಿ 
ಹುಲಿ ಸಂರಕ್ಷಣಾ ಯೋಜನೆ 50 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಏಪ್ರಿಲ್ 9ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬಂಡೀಪುರಕ್ಕೆ ಪ್ರಧಾನಿ ಮೋದಿ ಪಯಣ ಬೆಳೆಸಲಿದ್ದು, ಬೆಳಗ್ಗೆ 7.30ರ ಸುಮಾರಿಗೆ ಬಂಡೀಪುರಕ್ಕೆ ಭೇಟಿ ನೀಡಿ ಸಫಾರಿಯಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿ ಸಾಕ್ಷ್ಯ ಚಿತ್ರದ ಮಾವುತರಾದ ಬೊಮ್ಮನ್ ದಂಪತಿ ಜೊತೆ ಸಂವಾದ ನಡೆಸಲಿದ್ದಾರೆ.
ಇನ್ನು ಬೆಳಗ್ಗೆ 10.30ಕ್ಕೆ ಮೈಸೂರಿಗೆ ವಾಪಸ್ ಆಗಲಿರುವ ಪ್ರಧಾನಿ ಮೋದಿ ಕರ್ನಾಟಕ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ನಡೆಯಲಿರುವ ಹುಲಿ ಯೋಜನೆಯ 50ನೇ ವರ್ಷದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಧಾನಿ ಮೋದಿ ವಾಪಸ್ ತೆರಳಲಿದ್ದಾರೆ.
TV24 News Desk
the authorTV24 News Desk

Leave a Reply