ರಾಜ್ಯ

ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ..! 

ಬೆಂಗಳೂರು: ಚನಾವಣೆ ಹತ್ತಿರದಲ್ಲೇ  ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ವರಿಷ್ಠರು ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಘೋಷಿಸಿ ತೀವ್ರ ಕುತೂಹಲ ಮೂಡಿಸಿದ್ದಾರೆ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಈಶ್ವರಪ್ಪ ಅವರು ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೇನೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ.
ಕಳೆದ 40 ವರ್ಷಗಳ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪಮುಖ್ಯಮಂತ್ರಿವರೆಗೂ ಗೌರವದ ಸ್ಥಾನ ನೀಡಿದ ಪಕ್ಷದ ಎಲ್ಲ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಸದ್ಯ ಶಿವಮೊಗ್ಗದ ನಿವಾಸದಲ್ಲೇ ಇರುವ ಈಶ್ವರಪ್ಪ ಅವರು ಇ-ಮೇಲ್ ಮೂಲಕ ನಡ್ಡಾ ಅವರಿಗೆ ಪತ್ರ ರವಾನಿಸಿದ್ದಾರೆ.
TV24 News Desk
the authorTV24 News Desk

Leave a Reply