ದೇಶ

ಕೊರೊನಾ ಮಾಹಾಮಾರಿಗೆ ಒಂದೇ ದಿನ 29 ಮಂದಿ ಬಲಿ 

ನವದೆಹಲಿ: ಇಂದು ದೇಶದಲ್ಲಿ 11,109 ಹೊಸ ಪ್ರಕರಣಗಳು ಪತ್ತೆಯಾಗಿರುವುದರ ಜತೆಗೆ ಮಹಾಮಾರಿಗೆ 29 ಮಂದಿ ಬಲಿಯಾಗಿದ್ದಾರೆ. ಇಂದು 11,109 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಸೋಂಕಿನ ಪ್ರಮಾಣ 49,622ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
 
ದೈನಂದಿನ ಕೋವಿಡ್ ಪ್ರಕರಣಗಳು 236 ದಿನಗಳಲ್ಲಿ ಅತಿ ಹೆಚ್ಚಾಗಿದ್ದು, 29 ಮಂದಿ ಕೊರೊನಾ ಸೋಂಕಿನಿಂದ ಪ್ರಾಣ ಕಳೆದುಕೊಂಡಿರುವುದರಿಂದ ಸಾವಿನ ಸಂಖ್ಯೆ 5,31,064 ಕ್ಕೆ ಏರಿಕೆಯಾಗಿರುವುದು ಕಂಡು ಬಂದಿದೆ.
ದೆಹಲಿ ಮತ್ತು ರಾಜಸ್ಥಾನದಿಂದ ತಲಾ ಮೂರು ಸಾವುಗಳು ವರದಿಯಾಗಿದ್ದರೆ, ಛತ್ತೀಸ್‍ಗಢ ಮತ್ತು ಪಂಜಾಬ್‍ನಿಂದ ತಲಾ ಇಬ್ಬರು ಮತ್ತು ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪುದುಚೇರಿ, ತಮಿಳುನಾಡು, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಿಂದ ತಲಾ ಒಬ್ಬರು ಸಾವನ್ನಪ್ಪಿದ್ದರೆ ಕೇರಳದಲ್ಲಿ ಒಂಬತ್ತು ಮಂದಿ ಪ್ರಾಣ ಕಳೆದುಕೊಂಡಿರುವುದು ಖಚಿತಪಟ್ಟಿದೆ.
ವೈದ್ಯಕೀಯ ತಜ್ಞರು ವೈರಸ್‍ನ ಹೊಸ ಎಕ್ಸ್‍ಬಿಬಿ .1.16 ರೂಪಾಂತರವು ಉಲ್ಬಣಕ್ಕೆ ಚಾಲನೆ ನೀಡಬಹುದು ಎಂದು ಹೇಳಿದ್ದಾರೆ. ಆದಾಗ್ಯೂ, ಭಯಪಡುವ ಅಗತ್ಯವಿಲ್ಲ ಮತ್ತು ಜನರು ಕೋವಿಡ್ -ಸೂಕ್ತ ನಡವಳಿಕೆಯನ್ನು ಅನುಸರಿಸಬೇಕು ಮತ್ತು ಅವರ ಬೂಸ್ಟರ್ ಲಸಿಕೆಗಳನ್ನು ಪಡೆಯಬೇಕು ಎಂದು ಹೇಳಿದ್ದಾರೆ. 
TV24 News Desk
the authorTV24 News Desk

Leave a Reply