ರಾಜ್ಯ

ಕಾರಿನ ಟೈರ್ ಬ್ಲಾಸ್ಟ್  ಮಾಜಿ ಶಾಸಕಿ  ಸಾವು 

ಕರ್ನೂಲ್ : ತೆಲಂಗಾಣದ ಕರ್ನೂಲ್ ಜಿಲ್ಲೆಯ ಆಲೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ನೀರಜಾ ರೆಡ್ಡಿ ನಿಧನರಾಗಿದ್ದಾರೆ.
ಹೈದ್ರಾಬಾದ್‍ನಿಂದ ಕರ್ನೂಲ್‍ಗೆ ಬರುತ್ತಿದ್ದ ವೇಳೆ ತೆಲಂಗಾಣದ ಬೀಚುಪಲ್ಲಿ ಎಂಬಲ್ಲಿ ಅವರ ಕಾರಿನ ಟೈರು ಸ್ಪೋಟಿಸಿ ಕಾರು ಉರುಳಿಬಿದ್ದು ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಮತ್ತು ವೈಎಸ್‌ಆರ್‌ಸಿಪಿಯಲ್ಲಿದ್ದ ಬಿಜೆಪಿ ನಾಯಕಿ ನೀರಜಾ ರೆಡ್ಡಿ ಅವರು ಹೈದರಾಬಾದ್‌ನಿಂದ ಕರ್ನೂಲ್‌ಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.
ತೆಲಂಗಾಣದ ಜೋಗುಲಾಂಬ ಗದ್ವಾಲ್ ಬಳಿ ಭಾನುವಾರ ಕಾರು ಪಲ್ಟಿಯಾದ ಪರಿಣಾಮ ಬಿಜೆಪಿ ನಾಯಕಿ ಹಾಗೂ ಮಾಜಿ ಶಾಸಕಿ ಪಿ ನೀರಜಾ ರೆಡ್ಡಿ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರೆಡ್ಡಿ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಾಯಗೊಂಡಿರುವ ಆಕೆಯ ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
TV24 News Desk
the authorTV24 News Desk

Leave a Reply