ಬೆಳಗಾವಿ : ಇಂದು ೧೪೨ ನೇ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ, ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿಯು ಆ ದೇಶದ ಕಾರ್ಮಿಕರ ಮೇಲೆ ಅವಲಂಬಿತವಾಗಿರುತ್ತದೆ. ಅದೇ ರೀತಿ ಇಂದು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಸೀಫ್ ( ರಾಜು) ಸೇಠ್ ಕಾರ್ಮಿಕರ ದಿನಾಚರಣೆ ನಿಮಿತ್ಯ ನಗರದ ಆದಿತ್ಯ ಮಿಲ್ಕ್ ಕಂಪನಿಯ ಕಾರ್ಮಿಕರನ್ನು ಅವರಲ್ಲಿ ಭೇಟಿ ಮಾಡಿ ಕಾರ್ಮಿಕರು ದೇಶದ ಶಕ್ತಿ ಎಂದು ಅವರಿಗೆ ಪ್ರೋತ್ಸಾಹ ನೀಡಿದರು. ನಗರದ ಶಿವಬಸವ ಬಡಾವಣೆಯಲ್ಲಿ ಆಯೋಜಿಸಲಾಗಿದ್ದ ಕಾರ್ಮಿಕರ ದಿನಾಚರಣೆಯಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿದ ಅವರು ಇನ್ನು ಸಿಬ್ಬಂದಿಗಳ ಕುಶಲೋಪರಿ ವಿಚಾರಿಸಿ ಈ ಬಾರಿ ಕಾಂಗ್ರೆಸ್ ಗೆ ಮತ ನೀಡುವಂತೆ ಮನವಿ ಮಾಡಿದರು.ಅಲ್ಲದೆ ಕಾಂಗ್ರೆಸ್ ಗೆಲ್ಲಿಸುವದರಿಂದ ಉತ್ತರ ಕ್ಷೇತ್ರದ ವ್ಯಾಪ್ತಿಯ ರಸ್ತೆ,ಚರಂಡಿ ಮತ್ತು ಕುಡಿಯುವ ನೀರಿನ ಸಮಸ್ಯೆಗಳನ್ನು ಹೋಗಲಾಡಿಸುವುದು ಎಂದು ಹೇಳಿದರು.ಇನ್ನು ಕಾರ್ಯಕ್ರಮದಲ್ಲಿ,ರವಿ ಮುತ್ತಣ್ಣವರ,ರವಿ ಪಾಟೀಲ್ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
tv24plus.in > Blog > ಜಿಲ್ಲೆ > ಬೆಳಗಾವಿ > ಕಾರ್ಮಿಕರು ದೇಶದ ಶಕ್ತಿ: ಆಸೀಫ್ (ರಾಜು) ಸೇಠ್