ಧಾರವಾಡ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ. ಸಂಘ ಪರಿವಾರದಿಂದ ಬಂದು, ಬಿಜೆಪಿಯಲ್ಲಿ 6 ಬಾರಿ ಶಾಸಕರಾಗಿ, ಮಂತ್ರಿಯಾಗಿ, ವಿಪಕ್ಷನಾಯಕನಾಗಿ ಕೊನೆಗೆ ಮುಖ್ಯಮಂತ್ರಿಯಾದವರು ಕಾಂಗ್ರೆಸ್ ಸೇರಿರುವುದು ಬಿಜೆಪಿಗೆ ಶಾಕ್ ನೀಡಿದೆ. ಪ್ರಬಲ ಸಮುದಾಯಗಳಲ್ಲಿ ಒಂದಾದ ಲಿಂಗಾಯತ ಸಮುದಾಯ ಮುಖಂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅವರೇ ಹೇಳುವ ಪ್ರಕಾರ ಸ್ವಾಭಿಮಾನಕ್ಕೆ ದಕ್ಕೆಯಾಗಿದ್ದರಿಂದ.ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಜಗದೀಶ್ ಶೆಟ್ಟರ್ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು.ಈ ವೇಳೆ ಬಿಜೆಪಿ ಹಿರಿಯ ನಾಯಕರು ಮನವೊಲಿಸಲು ಎಷ್ಟೇ ಪ್ರಯತ್ನ ಮಾಡಿದರೂ ಹಠ ಬಿಡಲಿಲ್ಲ. ಕೊನೆಗೂ ಏಪ್ರಿಲ್ ೧೭ ರಂದು ಕಾಂಗ್ರೆಸ್ ಸೇರಿ ಟಿಕೆಟ್ ಸಹಿತ ಪಡೆದರು.
ಆದರೆ ಈಗ ಬಿಜೆಪಿ ಪಕ್ಷದ ಕರಪತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪೋಟೋ ಇದ್ದು, ಅದನ್ನೇ ಹಂಚಲಾಗುತ್ತಿದೆಯಂತೆ. ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ ಅವರ ಕರಪತ್ರದಲ್ಲಿ ಜಗದೀಶ್ ಶೆಟ್ಟರ್ ಅವರ ಭಾವಚಿತ್ರ ರಾರಾಜಿಸುತ್ತಿದ್ದು ಇದನ್ನು ನೋಡಿ ಕ್ಷೇತ್ರದ ಜನ ಬೆಚ್ಚಿ ಬೆರಗಾಗಾಗಿದ್ದಾರೆ.