ರಾಮದುರ್ಗ: ತಾಲ್ಲೂಕಿನ ಮುಳ್ಳೂರು ಘಾಟ್ ನಲ್ಲಿ ಭೀಕರ ಅಪಘಾತದಲ್ಲಿ ಸರಕಾರಿ ಸಾರಿಗೆ ಬಸ್ಸೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.
ಬುಧವಾರ ಸಾಯಂಕಾಲ ವೇಳೆ ರಾಮದುರ್ಗದಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಬಸ್ಸ್ ಚಾಲಕನ ಆಯತಪ್ಪಿ ಮುಳ್ಳೂರು ಘಾಟ್ ಬಳಿ ಕಂದಕಕ್ಕೆ ಉರಳಿದೆ. ಈ ಘಟನೆಯಲ್ಲಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ 7 ಜನ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.