ಧಾರವಾಡ

ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ?: ಶೆಟ್ಟರ 

ಹುಬ್ಬಳ್ಳಿ: ನಗರದಲ್ಲಿಂದು ಸುದ್ದಿಗಾರರೊಂಗೆ ಅವರು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಶೆಟ್ಟರ ಪಕ್ಷದಲ್ಲೀಗ ಸದ್ಯ ಒತ್ತಡ ಪರಿಸ್ಥಿತಿಯಿದೆ. ಹೀಗಾಗಿ ಮುಂದೆ ಒಳ್ಳೆಯ ಸ್ಥಾನ ನೀಡುವ ಭರವಸೆಇದೆ. ನಾನು ಯಾವುದೇ ಷರತ್ತು ವಿಧಿಸಿ ಕಾಂಗ್ರೆಸ್ ಸೇರಿರಲಿಲ್ಲ. ಆದರೆ ನಾನು ಮಾಡಿದ ಸಂಘಟನೆ ನೋಡಿ ಹಲವಾರು ಜನ ನನಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಈಗ ಬೇರೆ ಬೇರೆ ಕಾರಣದಿಂದ ಸಚಿವ ಸ್ಥಾನ ನೀಡಿಲ್ಲ. ಇನ್ನೂ ಸಾಕಷ್ಟು ಅವಕಾಶಗಳಿವೆ ಅದನ್ನು ನೀಡುತ್ತಾರೆ ಎಂಬ ಭರವಸೆಯಿದೆ ಎಂದರು.ಕಾಂಗ್ರೆಸ್ ನಾಯಕರು ಮುಂದೆ ಒಳ್ಳೆಯ ಸ್ಥಾನಮಾನ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಆಶಯ ವ್ಯಕ್ತಪಡಿಸಿದರು.
ನಾನು ಲೋಕಸಭೆ ಚುನಾವಣೆಗೆ ಸ್ರ್ಪಧಿಸುವ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಚುನಾವಣೆ ಒಂದು ವರ್ಷ ಇದೆ ನೋಡೋಣ ಮುಂದೆ ಏನಾಗುತ್ತದೆ ಎಂದರು. ಬಿಜೆಪಿ ನನ್ನ ಒಬ್ಬನನ್ನೇ ಸೋಲಿಸಲು ಹೋಗಿ ಇಡೀ ಪಕ್ಷ ಸೋತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ತಮ್ಮ ಸೋಲಿನ ಕುರಿತು ಮಾತನಾಡಿದ ಅವರು, ಸೋಲಿಗೆ ಕಾರಣವಾದದ್ದನ್ನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಹಿರಿಯ ನಾಯಕರೊಂದಿಗೆ ಚರ್ಚೆ ಆಗಿಲ್ಲ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಆಗಿಲ್ಲ ಎಂದ ಅವರು ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿಗೆ ತರಲು ಕಾರಣರಾದವರು ಈಗ ಎಲ್ಲಿದ್ದಾರೆ ಇನ್ನೂ ನನ್ನ ಪ್ರಶ್ನೆಗೆ ಯಾರು ಉತ್ತರ ಕೊಟ್ಟಿಲ್ಲ. ಅವರೆಲ್ಲರೂ ಈಗ ನಾಪತ್ತೆಯಾಗಿದ್ದಾರೆ ಎಂದು ಪರೋಕ್ಷವಾಗಿ ಬಿ.ಎಲ್.ಸಂತೋಷಗೆ ಶೆಟ್ಟರ್ ಟಾಂಗ್ ನೀಡಿದರು.
ಇನ್ನು ಭಾರತೀಯ ಜನತಾ ಪಕ್ಷದಲ್ಲಿ ಯಾವುದೇ ಸಮರ್ಥ ನಾಯಕರು ಇಲ್ಲ. ವಿರೋಧ ಪಕ್ಷದ ನಾಯಕನನ್ನು ಆರಿಸಲು ಯಾರಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದರು.
TV24 News Desk
the authorTV24 News Desk

Leave a Reply