ಬೆಳಗಾವಿಬೆಳಗಾವಿ ನಗರ

ಬೆಳಗಾವಿಯಲ್ಲಿ ರಾಜು ಸೇಠ್ ದರ್ಬಾರ್ ಶುರು..! 

ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ರಾಜು ಸೇಠ್  ಅಧಿಕಾರಿಗಳಿಗೆ  ಖಡಕ್   ವಾರ್ನಿಂಗ್ …!
ಬೆಳಗಾವಿ: ನಗರದ ಜಿಲ್ಲಾ ಆಸ್ಪತ್ರೆಗೆ ಇಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಅಲಿಯಾಸ್ ರಾಜು ಸೇಠ್ ಭೇಟಿ ನೀಡಿ ವಿವಿಧ ವಿಭಾಗಗಳ ಪರಿಶೀಲನೆ ನಡೆಸಿದರು. ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದ ಅವರು, ಸರಕಾರದಿಂದ ಅಗತ್ಯ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಬಳಿಕ ಆಸೀಫ್ ಅಲಿಯಾಸ್ ರಾಜು ಸೇಠ್ ಹೊಸ ಹುರುಪಿನಿಂದ ಕೆಲಸ ಆರಂಭಿಸಿದ್ದಾರೆ. ನಿನ್ನೆಯಷ್ಟೇ ಮುತ್ಯಾನಟ್ಟಿ ಗ್ರಾಮಕ್ಕೆ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಿದರು. ಬಳಿಕ ಇಂದು ನಗರದ ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳ ಪರಿಶೀಲನೆ ನಡೆಸಿದರು. ಅಲ್ಲದೆ ರೋಗಿಗಳಿಗೆ ನೀಡುವ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಾಸಕ ಸೇಠ್ ಅವರು ಬೀಮ್ಸ್ ನಿರ್ದೇಶಕ ಡಾ.ಅಶೋಕ್ ಶೆಟ್ಟಿ, ಡಾ.ಎ.ಬಿ.ಪಾಟೀಲ್ ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚಿಸಿ ಆಸ್ಪತ್ರೆಯ ಇಂದಿನ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಬೀಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಶುಶ್ರೂಷಾ ಸಿಬ್ಬಂದಿ ಕೊರತೆ ಇದೆ ಎಂದು ಶಾಸಕ ಸೇಠ್ ಅವರ ಗಮನಕ್ಕೆ ತರಲಾಯಿತು.
ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ರಾಜು ಸೇಠ್, ಇಂದು ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದೇನೆ. ಐಸಿಯು, ಡಯಾಲಿಸಿಸ್ ಮತ್ತಿತರ ವಿಭಾಗಗಳನ್ನು ಪರಿಶೀಲಿಸಲಾಯಿತು. ಆಹಾರ ಸರಬರಾಜು ಇಲಾಖೆಯಲ್ಲಿ ಆಹಾರದ ಗುಣಮಟ್ಟವನ್ನು ಪರಿಶೀಲಿಸಿಲಾಯಿತು. ಬಳಿಕ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿ ಕೊರತೆ ಇದೆ. ಈಗಲೂ ಇಲ್ಲಿನ ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನೂ ಸ್ಥಾಪಿಸಲಾಗಿದೆ. ಸರ್ಕಾರದಿಂದ ಅಗತ್ಯ ಉಪಕರಣಗಳು ಮತ್ತು ಸಾಮಗ್ರಿಗಳನ್ನು ಖರೀದಿಸಲಾಗುವುದು. ಇದಲ್ಲದೇ ಅಗತ್ಯ ವೈದ್ಯರು ಹಾಗೂ ಸಿಬ್ಬಂದಿ ನೇಮಕಕ್ಕೆ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಪ್ರಯತ್ನಿಸುವುದಾಗಿ ತಿಳಿಸಿದರು.
ಇದೇ ವೇಳೆ ಬೀಮ್ಸ್ ಆಸ್ಪತ್ರೆಗೆ ತಿಂಗಳಿಗೆ ಎರಡರಿಂದ ಮೂರು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸುವ ಇಂಗಿತವನ್ನು ಶಾಸಕ ರಾಜು ಸೇಠ್ ವ್ಯಕ್ತಪಡಿಸಿದ್ದಾರೆ. 
TV24 News Desk
the authorTV24 News Desk

Leave a Reply