ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲಾ ಬೇಸರ ವ್ಯಕ್ತಪಡಿಸಿದ್ದಾರೆ. ಕುಟುಂಬ ಸದಸ್ಯರನ್ನ ಹತ್ತಿರಕ್ಕೆ ಬಿಟ್ಟುಕೊಳ್ಳುತ್ತಿರುವುದೇಕೆ ಎಂದು ಎಚ್ಚರಿಕೆಯ ಜೊತೆಗೆ ಅಸಮಾಧಾನ ಹೊರಹಾಕಿದ್ದಾರೆ.
ಸಹೋದರ ಚನ್ನರಾಜ್ ಹಟ್ಟಿಹೊಳಿ ಇಲಾಖೆ ವಿಚಾರದಲ್ಲಿ ಮೂಗು ತೂರಿಸದಂತೆ ಗಮನವಹಿಸಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಎಚ್ಚರಿಕೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹಸ್ತಕ್ಷೇಪ ಯಾಕೆ?. ಇಲಾಖೆಯಲ್ಲಿ ಹಸ್ತಕ್ಷೇಪ ಬೇಡವೆಂದು ಹೇಳಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ಗೆ ಸುರ್ಜೇವಾಲಾ ಅವರು ಸಂದೇಶ ರವಾನಿಸಿದ್ದಾರೆ. ಕುಟುಂಬದ ಸದಸ್ಯರನ್ನ ಇಲಾಖೆಗೆ ಬಿಟ್ಟುಕೊಳ್ಳಬಾರದು. ಇಲಾಖೆ ವಿಚಾರದಲ್ಲಿ ಮೂಗು ತೂರಿಸದಂತೆ ಗಮನವಹಿಸಿ. ನಮ್ಮ ಸರ್ಕಾರ ಚುನಾವಣೆಗೆ ಗೆದ್ದು ಈಗ ಅಸ್ತಿತ್ವಕ್ಕೆ ಬಂದಿದೆ. ಭ್ರಷ್ಟಾಚಾರದ ವಿಚಾರವಾಗಿ ಹೋರಾಟ ಮಾಡಿ ಗೆದ್ದಿದ್ದೇವೆ. ಜನರ ನಿರೀಕ್ಷೆಯಂತೆ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ. ಇನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ವರ್ತನೆಗೆ ಇಲಾಖಾಧಿಕಾರಿಗಳು ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
tv24plus.in > Blog > ರಾಜ್ಯ > ಲಕ್ಷ್ಮಿ ಅಕ್ಕಾಗೆ ವಾರ್ನಿಂಗ್ ಕೊಟ್ಟ ಸುರ್ಜೆವಾಲಾ
the authorTV24 News Desk
All posts byTV24 News Desk
Leave a reply
You Might Also Like
ವಾಹನ ಸವಾರರಿಗೆ ಬಿಗ್ ಶಾಕ್ ..!
TV24 News DeskMarch 31, 2024
ವಾರ್ತಾ ಇಲಾಖೆ ನೂತನ ಆಯುಕ್ತರ ನೇಮಕ
TV24 News DeskMarch 31, 2024