ರಾಜ್ಯ

“ಕೈ”ನಲ್ಲಿ ತಲ್ಲಣ ಸೃಷ್ಟಿಸಿದ ಹೆಚ್ಡಿಕೆ ಪೆನ್‍ಡ್ರೈವ್ ಬಾಂಬ್..!

ಮೈಸೂರು: ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಮಾರಸ್ವಾಮಿ ಅವರು, ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಬಗ್ಗೆ ಸರ್ಕಾರ ಹಾಗೂ ಎಲ್ಲರೂ ಮಾತನಾಡುತ್ತಿದ್ದಾರೆ. ಕೆಲವರು ಇದೂ ಸಹ ಹಿಟ್ ಆಯಂಡ್ ರನ್ ಅಂತಿದ್ದಾರೆ. ಈ ಬಗ್ಗೆ ನಾನು ಈಗ ಏನನ್ನೂ ಮಾತನಾಡುವುದಿಲ್ಲ. ಸರಿಯಾದ ಸಮಯ ನೋಡಿ ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದರು.
ಮೈಸೂರಿಗೆ ಬೆಳಗ್ಗೆ ಆಗಮಿಸಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಎಸ್​ಆರ್​ಟಿಸಿ ಚಾಲಕ ಜಗದೀಶ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಚಾಲಕನ ಆತ್ಮಹತ್ಯೆಗೆ ಕಾರಣ, ನೀಡುತ್ತಿರುವ ಕಿರುಕುಳದ ಬಗ್ಗೆ ಆತ ಡೆತ್​ನೋಟ್​ ಬರೆದಿಟ್ಟಿದ್ದಾನೆ. ಸದ್ಯ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವೈದ್ಯರಲ್ಲಿ ಮಾಹಿತಿ ಪಡೆದಿದ್ದೇನೆ. ಇವರ ವರ್ಗಾವಣೆಯ ಹಿಂದೆ ಸಚಿವರ ಆದೇಶ ಮತ್ತು ಒತ್ತಡವಿದೆ ಎಂದು ಅಧಿಕಾರಿಗಳೇ ಹೇಳುತ್ತಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಚಾಲಕನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ. ಪೊಲೀಸರನ್ನು ಕೇಳಿದರೆ ವ್ಯಕ್ತಿ ಇನ್ನೂ ಸತ್ತಿಲ್ಲ, ಅದಕ್ಕೆ ಎಫ್​ಐಆರ್ ಹಾಕಿಲ್ಲ ಎಂದು ಹೇಳಿದ್ದಾರೆ. ಆತ್ಮಹತ್ಯೆಗೂ ಮುನ್ನ ಜಗದೀಶ್ ಡೆತ್​ನೋಟ್​ನಲ್ಲಿ ಎಲ್ಲವನ್ನೂ ಬರೆದಿದ್ದಾನೆ. ಆದ್ದರಿಂದ ಈ ಬಗ್ಗೆ ತನಿಖೆ ಆಗಬೇಕು. ಮುಖ್ಯಮಂತ್ರಿಗಳು ತಕ್ಷಣ ಈ ಮಂತ್ರಿಯನ್ನು ವಜಾ ಮಾಡಿ, ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು. ಇಂದು ಈ ವಿಚಾರವನ್ನು ವಿಧಾನ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ಅಧಿಕಾರಿಗಳು ರಾಜಕಾರಣಿಗಳ ಮಾತು ಕೇಳಿ ಕಳ್ಳಾಟ ಆಡುತ್ತಿದ್ದಾರೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದರು.
ಸಿಎಂ ನೇತೃತ್ವದಲ್ಲಿ ವರ್ಗಾವಣೆ ದಂಧೆ: ರಾಜ್ಯದಲ್ಲಿ ಹೊಸ ಸರ್ಕಾರ ಬಂದು 50 ದಿನ ಆಗಿಲ್ಲ. ವರ್ಗಾವಣೆ ದಂಧೆ ನಡೆಯುತ್ತಿದೆ. ಯಾವುದೇ ಹುದ್ದೆಯ ವರ್ಗಾವಣೆಗೆ ಇಂತಿಷ್ಟು ಹಣ ಫಿಕ್ಸ್ ಆಗಿದೆ. ಹಣವಿಲ್ಲದೇ ಯಾವುದೇ ವರ್ಗಾವಣೆ ನಡೆಯದು. ಇದು ಸಿಎಂ ನೇತೃತ್ವದಲ್ಲೇ ನಡೆಯುತ್ತಿದೆ. ಪ್ರಮುಖ ಹುದ್ದೆಗಳೆಲ್ಲ ದುಡ್ಡಿನಿಂದಲೇ ನಡೆಯುತ್ತಿದ್ದು, ಇದಕ್ಕೆ ಸಿಎಂ ನೇತೃತ್ವವಿದೆ ಎಂದು ಹೇಳಿದರು
TV24 News Desk
the authorTV24 News Desk

Leave a Reply