ಹುಕ್ಕೇರಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ದಂಪತಿ ಭೀಕರ ಹತ್ಯೆ ನಡೆದಿದೆ. ಮೃತರನ್ನು ಗಜೇಂದ್ರ ವಣ್ಣೂರೆ(60) ಹಾಗೂ ಆತನ ಪತ್ನಿ ದ್ರಾಕ್ಷಾಯಿಣಿ ವಣ್ಣೂರೆ(48) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹಿರೇಕೋಡಿ ಜೈನ ಆಶ್ರಮದ ಒಳಗೇ ಹೊಕ್ಕು ಜೈನಮುನಿ ಕಾಮಕುಮಾರ ಮಹಾರಾಜ್ ಸ್ವಾಮೀಜಿಯನ್ನು ಕೊಂದ ಮಾದರಿಯಲ್ಲೇ, ದಂಪತಿ ವಾಸವಿರುವ ಸ್ವಂತ ಮನೆಗೆ ನುಗ್ಗಿ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ನಿನ್ನೆಯಿಂದ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದು, ಇಂದು ಬಾಗಿಲು ತೆಗೆದು ನೋಡಿದಾಗ ದಂಪತಿ ಕೊಲೆ ಆಗಿರುವುದು ಬೆಳಕಿಗೆ ಬಂದಿದೆ. ಕೇಸ್ ದಾಖಲಿಸಿ ಕೊಲೆ ಆರೋಪಿಗಳಿಗಾಗಿ ಯಮಕನಮರಡಿ ಪೊಲೀಸ್ರು ಹುಡುಕಾಟ ಆರಂಭಿಸಿದ್ದಾರೆ.