ಬೆಳಗಾವಿ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಬಿಜೆಪಿ ಅಡಳಿತದಲ್ಲಿ ಕುಸಿದಿದ್ದ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ವಾಗ್ದಾನವೂ ಒಂದಾಗಿತ್ತು. ಅದಾದ ನಂತರ ಕಾಂಗ್ರೆಸ್ ಪ ಬಹುಮತದಿಂದ ಆಯ್ಕೆಯಾಗಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತು. ಸರ್ಕಾರ ಅಸ್ತಿತ್ವಕ್ಕೆ ಒಂದು ಸುಮಾರು ಎರಡು ತಿಂಗಳು ಕಳೆಯುವುದರಲ್ಲಿದ್ದರೂ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಆಶ್ರದಮ ಜೈನ್ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಮಾಡಿದ್ದು ಖಂಡನೀಯ. ಇದು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಬಿಜೆಪಿ ಆಡಳಿತ ಅವಧಿಯ ಕುಸಿತದ ಹಂತದಲ್ಲಿಯೇ ಇದೆ ಎಂದು ತೋರಿಸಿಕೊಡುತ್ತದೆ ಎಂದು ಎಸ್ ಡಿಪಿಐ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟ್ ಹೇಳಿದರು.
ಶುಕ್ರವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ವಾಮಮಾರ್ಗದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯ ಆಡಳಿತದಲ್ಲಿ ಹದಗೆಟ್ಟಿದ್ದ ಕಾನೂನು ಸುವ್ಯವಸ್ಥೆ ಕಾಂಗ್ರೆಸ್ ಸರಕಾರದಲ್ಲಿಯೂ ಮುಂದುವರೆದಿದೆ. ಜೈನ್ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಮಾಡಿರುವುದು ನಿದರ್ಶನವಾಗಿದೆ. ಅಲ್ಲದೆ, ಕೋಲಾರದಲ್ಲಿ ಯುವತಿಯ ಮರ್ಯಾದೆ ಹತ್ಯೆ, ಮೈಸೂರಿನ ವೇಣುಗೋಪಾಲ ಹತ್ಯೆ, ಬೆಂಗಳೂರಿನ ಜೋಡಿ ಕೊಲೆ ನಡೆದಿದೆ. ಮತ್ತೆ ಇಂಥ ಘಟನೆ ಮರುಕಳಿಸದಂತೆ ಸರಕಾರ ನೋಡಿಕೊಳ್ಳಬೇಕೆಂದರು.ಜೈನ್ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಲ್ಲಿ ನಾರಾಯಣ ಮಾಳಿ ಎಂಬಾತ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ. ಪ್ರಮುಖ ವ್ಯಕ್ತಿ ಮುಸ್ಲಿಂ ಸಮುದಾಯದವರಾಗಿದ್ದರೆ ಬಿಜೆಪಿಯವರು ರಾಜ್ಯಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಚಿಕ್ಕೋಡಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ನೇತೃತ್ವದ ತಂಡ ನಂದಿ ಆಶ್ರಮಕ್ಕೆ ಭೇಟಿ ನೀಡಿದ್ದು ರಾಜಕೀಯ ಲಾಭ ಪಡೆಯಲು ಎಂದು ವಾಗ್ದಾಳಿ ನಡೆಸಿದರು.ಬೆಳಗಾವಿ ಜಿಲ್ಲೆಯ ಪೊಲೀಸರು ಉತ್ತಮವಾದ ಕೆಲಸ ಮಾಡಿದ್ದಾರೆ. ಜೈನ್ ಮುನಿ ಜೈನ್ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಮಾಡಿದ ಆರೋಪಿಗಳನ್ನು ಕೇವಲ ಆರು ಗಂಟೆಯ ಒಳಗಾಗಿ ಬಂಧನ ಮಾಡಿರುವುದು ಶ್ಲಾಘನೀಯ ಎಂದರು.