ಜಿಲ್ಲೆಯಾದ್ಯಂತ ಭಾರೀ ಮಳೆ ಬೆಳಗಾವಿ ತಾಲುಕು,ಖಾನಾಪುರ, ಕಿತ್ತೂರು ಶಾಲೆಗಳಿಗೆ ಡಿಸಿ ನಿತೇಶ್ ಪಾಟೀಲ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ
ಬೆಳಗಾವಿ, ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ ಸೋಮವಾರ ಒಂದು ದಿನ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ಹಿತದೃಷ್ಟಿ ಮತ್ತು ಮುಂಜಾಗ್ರತ ಕ್ರಮವಾಗಿ 3 ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮೂರು-ನಾಲ್ಕು ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಹಾಗಾಗಿ ಇಂದು ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮಕ್ಕೆ ಭೇಟಿ ನೀಡಿದ ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಕೃಷ್ಣಾ ನದಿಯಲ್ಲಿ ಬೋಟ್ನಲ್ಲಿ ತೆರಳಿ ಒಳಹರಿವು ಪ್ರಮಾಣ ವೀಕ್ಷಣೆ ಮಾಡಿದ್ದಾರೆ.
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ 3 ದಿನದಿಂದ ಮಳೆ ಆಗುತ್ತಿದೆ. ಸದ್ಯ ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. 2 ಲಕ್ಷ ಕ್ಯೂಸೆಕ್ ನೀರು ಹರಿಯುವವರೆಗೂ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಇಲ್ಲ. ಆದರೂ ಏನೆಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಪರಿಶೀಲನೆ ಮಾಡಲಾಗಿದೆ ಎಂದು ಹೇಳಿದರು.