ಬೆಳಗಾವಿ

ಅಥಣಿ ಗೋಡೆ ಕುಸಿದು ಯುವಕನ ಸಾವು 

ಬೆಳಗಾವಿ ;ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಯುವಕ ಸಾವನ್ನಪ್ಪಿದ್ದ ಘಟನೆ ಅಥಣಿ ಪಟ್ಟಣದಲ್ಲಿ ನಡೆದಿದೆ. ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿ. ಸತತವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಯುವಕನ ಮೈ ಮೇಲೆ ಕುಸಿತದ ಕಲ್ಲು ಮಣ್ಣು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅಥಣಿ ಪಿಎಸ್ಐ ಹಾಗೂ ಸಿಪಿಐ ಭೇಟಿ ಪರಿಶೀಲನೆ ಮಾಡುತ್ತಿದ್ದು, ಅಥಣಿ ಶಾಸಕರ ಪರವಾಗಿ ಮುಖಂಡ‌ ಚಿದಾನಂದ ಸವದಿ ಭೇಟಿ ನೀಡಿ ಸಾಂತ್ವಾನ ಹೇಳಿದರು. ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ವಯಸ್ಸಿಗೆ ಬಂದಿದ್ದ ಯುವಕನ ಸಾವಿನಿಂದ ಕುಟುಂಬಸ್ಥರ ಆಕ್ರಂದಣ ಮುಗಿಲು ಮುಟ್ಟಿದೆ‌.
TV24 News Desk
the authorTV24 News Desk

Leave a Reply