ಹೆಚ್ಡಿಕೆ ಮಾತ್ರವಲ್ಲ ನನ್ನ ಹತ್ತಿರನೂ ಪೆನ್ಡ್ರೈವ್ ಇದೆ ಲಕ್ಷ್ಮಣ ಸವದಿ ಹೊಸ ಬಾಂಬ್
ಬೆಳಗಾವಿ: ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಲಕ್ಷ್ಮಣ ಸವದಿ, ನನ್ನ ಹತ್ತಿರ ಪೆನ್ಡ್ರೈವ್ ಗಳು ಇದ್ದಾವೆ.
ಸಂದರ್ಭ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪೆನ್ಡ್ರೈವ್ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ ಮಾತನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ . ಅವರ ಕಡೆ ಪೆನ ಡ್ರೈವ್ ವಿದ್ದರೆ ಏಕೆ ಬಿಡುಗಡೆ ಮಾಡುತ್ತಿಲ್ಲ,ತುಂಬಾ ಜನರ ಕಡೆ ಪೆನ್ಡ್ರೈವ್ ಇದ್ದಾವೆ. ನನ್ನ ಹತ್ತಿರ ಒಂದು ಪೆನ್ಡ್ರೈವ್ ಇದೆ, ಕಾಲಾನುಸಾರ ಬಿಡುಗಡೆ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ. ವಿರೋಧ ಪಕ್ಷ ಇದೆಯೆಂದು ತೋರಿಸಲು ಆ ರೀತಿ ಕುಮಾರಸ್ವಾಮಿ ಮಾತನಾಡಿದ್ದಾರೆ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.