ಧಾಮಣೆ: ಪೊಲೀಸರಿಂದ ರಾಣಿ ಚೆನ್ನಮ್ಮ ಮೂರ್ತಿ ತೆರವು ವಿಚಾರವಾಗಿ ವಿದ್ಯಾರ್ಥಿ ಹಾಗೂ ಪೋಲೀಸರ ನಡುವೆ ಧಾಮಣೆ ಗ್ರಾಮದಲ್ಲಿ ಮಾತಿನ ಚಕಮಕಿ ನಡೆದಿದೆ. ಕುರಬಟ್ಟಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ರಾಣಿ ಚೆನ್ನಮ್ಮ ಅಭಿಮಾನಿಗಳು ಸೇರಿ ಚೆನ್ನಮ್ಮ ಮೂರ್ತಿಯನ್ನು ಅನಾವರಣಗೊಳಿಸಿದ್ದರು. ಈ ಹಿನ್ನಲೆ ವಡಗಾವಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೂರ್ತಿಯನ್ನು ತೆರವುಗೊಳಿಸಲು ಮುಂದಾದಾಗ ಗ್ರಾಮಸ್ಥರು, ಚೆನ್ನಮ್ಮ ಅಭಿಮಾನಿಗಳು ಹಾಗೂ ಪೋಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಅಲ್ಲಿ ಸೇರಿದ್ದ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಚೆನ್ನಮ್ಮ ಮೂರ್ತಿ ಹಾಗು ಅಲ್ಲಿ ಸೇರಿದ್ದ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ