ಬೆಳಗಾವಿ

ಹತ್ಯೆ ಬಳಿಕ ರುಂಡದ ಜೊತೆ ಗ್ರಾಮಕ್ಕೆ ಬಂದ ಹಂತಕ..!  

ಹಾರೂಗೇರಿ:  ಪಟ್ಟಣದ ಹೊರವಲಯದ ಬಡಬ್ಯಾಕೂಡ್‌ ಗ್ರಾಮದಲ್ಲಿ ತನ್ನ ಗೆಳೆಯನ ಹತ್ಯೆ ಮಾಡಿದ ಘಟನೆ ನಡೆದಿದೆ. ಅಕ್ಬರ್‌ ಜಮಾದಾರ್ (21) ಕೊಲೆಯಾದ ವ್ಯಕ್ತಿ. ಆರೋಪಿ ಮಹಾಂತೇಶ ಪೂಜಾರ್(23) ಬಸ್ತವಾಡ ಬಳಿಯ ಅರಣ್ಯದಲ್ಲಿ ಸ್ನೇಹಿತನನ್ನು ಹತ್ಯೆ ಮಾಡಿ, ಬಳಿಕ ರುಂಡದ ಜೊತೆ ಗ್ರಾಮಕ್ಕೆ ಬಂದಿದ್ದ. ಇದನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆ  ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹಾಂತೇಶ್​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 
 
ಕೊಲೆಯಾದ ಅಕ್ಬರ್ ಮತ್ತು ಹಂತಕ ಮಹಾಂತೇಶ ಇಬ್ಬರೂ ಸ್ನೇಹಿತರಾಗಿದ್ದು, ಜೊತೆಗೆ ಇಬ್ಬರೂ ಸೇರಿ ಎಮ್ಮೆ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದರು. ಇವರ ವಿರುದ್ಧ ಹಾರೂಗೇರಿ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಇಂತಹ ಚಡ್ಡಿ ಗೆಳೆಯನನ್ನೇ ಇದೀಗ ಕೊಲೆ ಮಾಡಿದ್ದಾನೆ. ಮಾಹಿತಿ ಪ್ರಕಾರ ಇಬ್ಬರ ನಡುವೆ ಹಣದ ವಿಷಯವಾಗಿ ಗಲಾಟೆಯಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ, ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆ ಬಳಿಕ ಗೊತ್ತಾಗಲಿದೆ.
ಜೀವಕ್ಕೆ ಜೀವ ಎನ್ನುತ್ತಿದ್ದ ಗೆಳೆಯನನ್ನೇ ಕೊಲೆ ಮಾಡಿದ್ದು, ಮೃತನ ಪೋಷಕರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಇನ್ನು ಹಾರೂಗೇರಿ ಸರ್ಕಾರಿ ಆಸ್ಪತ್ರೆಗೆ ಅಕ್ಬರ್ ಮೃತದೇಹ ಸ್ಥಳಾಂತರ ಮಾಡಲಾಗಿದ್ದು, ಆಸ್ಪತ್ರೆ ಬಳಿ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ.
TV24 News Desk
the authorTV24 News Desk

Leave a Reply