ಬೆಳಗಾವಿ

ಗೃಹಲಕ್ಷ್ಮೀ ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರ ..!

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವದ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯನ್ನು ಆಗಸ್ಟ್ 30 ಕ್ಕೆ ಮುಂದೂಡಲಾಗಿದೆ. ಈ ಹಿಂದೆ ನಿಗದಿ ಮಾಡಿದ ನಗರಗಳನ್ನು ಸಹ ಬದಲಾಯಿದ್ದಾರೆ.
ಈ ಮೊದಲು ಕುಂದಾನಗರಿ ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅದ್ದ್ದೂರಿಯಾಗಿ ಉದ್ಘಾಟನೆ ಮಾಡಲು ಸಿದ್ಧತೆ ನಡೆದಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಆಗಸ್ಟ್ 30 ರಂದು ಸಮಾವೇಶ ನಡೆಸಿ ಗೃಹಲಕ್ಷ್ಮೀ ಯೋಜನೆಗೆ ರಾಜ್ಯ ಸರ್ಕಾರ ಅಧಿಕೃತ ಚಾಲನೆ ನೀಡಲಿದೆ ಎಂದು ತಿಳಿದು ಬಂದಿದೆ.

TV24 News Desk
the authorTV24 News Desk

Leave a Reply