ಧಾರವಾಡ

ಜಗದೀಶ್ ಶೆಟ್ಟರ್‌ಗೆ ಕರೆ ಮಾಡಿದ ಅಮಿತ್ ಷಾ…! 

ಶುಕ್ರವಾರ ನಿನ್ನೆ  (ಆ.25) ಸಂಜೆ ಅಮಿತ್​ ಶಾ ಕರೆ ಮಾಡಿದ್ದು, ಮನವೊಲಿಸಲು ಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಕೇಂದ್ರ ಗೃಹ ಸಚಿವ  ಅಮಿತ್​ ಶಾ, ಜಗದೀಶ್​ ಶೆಟ್ಟರ್​ಗೆ ಕರೆ ಮಾಡಿ 10 ನಿಮಿಷ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶೆಟ್ಟರ್ ಆಪ್ತ ಮೂಲಗಳಿಂದ ಮಾಹಿತಿ ದೊರೆತಿದೆ.
ಹುಬ್ಬಳ್ಳಿ : ಮಹತ್ವದ ಬೆಳೆವಣಿಗೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರಿಗೆ ದೂರವಾಣಿ ಕರೆ ಮಾಡಿರುವುದು ಭಾರೀ ಮಹತ್ವ ಪಡೆದುಕೊಂಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್‍ಗೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ್ದರಿಂದ ಬೇಸರಗೊಂಡ ಅವರು ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದರು.
ಇದೀಗ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಬಿಜೆಪಿಯ ಅಸಮಾಧಾನಗೊಂಡಿರುವ ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ 2ನೇ ಮತ್ತು 3ನೇ ಹಂತದ ನಾಯಕರನ್ನು ಗುರಿಯಾಗಿಟ್ಟುಕೊಂಡು ಆಪರೇಷನ್ ಹಸ್ತ ನಡೆಸುತ್ತಿರುವುದು ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿದೆ.
ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಅಮಿತ್ ಷಾ ಅವರು ಖುದ್ದು ಜಗದೀಶ್ ಶೆಟ್ಟರ್ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿರುವುದು ಭಾರೀ ಸಂಚಲನ ಸೃಷ್ಟಿಸಿದೆ. ಪಕ್ಷಕ್ಕೆ ಪುನಃ ಬರುವಂತೆ ಆಹ್ವಾನ ನೀಡಿದರೋ ಇಲ್ಲವೇ ಪ್ರಮುಖ ಹುದ್ದೆ ನೀಡುವ ಬಗ್ಗೆ ಇಬ್ಬರ ನಡುವೆ ಮಾತುಕತೆ ನಡೆದಿದೆಯೋ ಎಂಬುದರ ಬಗ್ಗೆ ಈವರೆಗೂ ಯಾವುದು ಖಚಿತಪಟ್ಟಿಲ್ಲ.
ಮೂಲಗಳ ಪ್ರಕಾರ ಅಮಿತ್ ಷಾ ಅವರು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಬರುವಂತೆ ಆಹ್ವಾನ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ ಇದನ್ನು ತಿರಸ್ಕರಿಸಿರುವ ಶೆಟ್ಟರ್, ಈಗಾಗಲೇ ನಾನು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದೇನೆ. ಈ ಸಂದರ್ಭದಲ್ಲಿ ಪಕ್ಷ ಬಿಟ್ಟು ಬಂದರೆ ನನ್ನ ಬಗ್ಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
TV24 News Desk
the authorTV24 News Desk

Leave a Reply