ರಾಜ್ಯ

ಸಿಎಂ ಸಿದ್ದುವರನ್ನು ಕಾಡುತ್ತಿವೆ 5 ಸಮಸ್ಯೆಗಳು : ಬಿಜೆಪಿ..! 

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಜಯಗಳಿಸಿ ಸ್ಪಷ್ಟ ಬಹುಮತದ ಸರ್ಕಾರ ರಚನೆ ಮಾಡಿದರೂ ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿ ಇಲ್ಲ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.
 
ಇಂದು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಪಕ್ಷದಲ್ಲಿನ ಬಣ ರಾಜಕೀಯ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾಡುತ್ತಿದೆ. ಬರಗಾಲ, ಜಲಾಶಯಗಳು ಖಾಲಿ ಆಗಿರುವುದು, ಬೆಲೆ ಏರಿಕೆ ಮುಂತಾದ ಸಮಸ್ಯೆಗಳು ಕರ್ನಾಟಕ ರಾಜ್ಯವನ್ನು ಕಾಡುತ್ತಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾಡುತ್ತಿರುವ 5 ಸಮಸ್ಯೆಗಳು ಬೇರೆ ಇವೆ ಎಂದು 5 ಸಮಸ್ಯೆಗಳ ಪಟ್ಟಿಯನ್ನು ನೀಡಿದೆ.
 
ರಾಜ್ಯದ ಜನರನ್ನು ಕಾಡುತ್ತಿರುವ 5 ಸಮಸ್ಯೆಗಳು
  1.  ಬರಗಾಲ
  2.  ಬರಿದಾದ ಜಲಾಶಯಗಳು
  3. ಬೆಲೆ ಏರಿಕೆ
  4. ಕಲುಷಿತ ನೀರು ಪೂರೈಕೆ
  5. ರೈತರ ಆತ್ಮಹತ್ಯೆ

ಏಳಿ, ಎದ್ದೇಳಿ ನಿದ್ದೆಯಿಂದ ಹೊರ ಬನ್ನಿ ಸಿದ್ದರಾಮಯ್ಯ! ಬಿಜೆಪಿಯ ಟ್ವೀಟ್ ರಾಜ್ಯದ ಜನರನ್ನು ಕಾಡುತ್ತಿರುವ 5 ಸಮಸ್ಯೆಗಳು ಬರಗಾಲ, ಬರಿದಾದ ಜಲಾಶಯಗಳು, ಬೆಲೆ ಏರಿಕೆ, ಕಲುಷಿತ ನೀರು ಪೂರೈಕೆ, ರೈತರ ಆತ್ಮಹತ್ಯೆ ಎಂದು ಉಲ್ಲೇಖಿಸಿದೆ.

TV24 News Desk
the authorTV24 News Desk

Leave a Reply