ನಮ್ಮನ್ನು ಕಾಪಾಡಿ ಸರ್ಕಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಅಳಲು
ಬೆಳಗಾವಿ : ನಗರದಲ್ಲಿಂದು ಪರ್ಯಾಯವಾಗಿ ಶಿಶುಪಾಲನಾ ಕೇಂದ್ರಗಳು ಮತ್ತು ಶಾಲಾಪೂರ್ವ ಶಿಕ್ಷಣ ತರಗತಿಗಳನ್ನು ವಿರೋಧಿಸಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಕೀಯರ ಗೌರವಧನ ಹೆಚ್ಚಳದ 6ನೇ ಗ್ಯಾರಂಟಿ ಜಾರಿಗೊಳಿಸುವಂತೆ ಒತ್ತಾಯಿಸಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಳೆದ 48 ವರ್ಷಗಳಿಂದ ಶೂನ್ಯದಿಂದ 6 ವರ್ಷ ವಯೋಮಾನದ ಮಕ್ಕಳಿಗಾಗಿ ಸಮಗ್ರ ಶಿಶು ಅಭಿವೃದ್ಧಿ ಯೋಜನ (ಐ.ಸಿ.ಡಿ.ಎಸ್) ಯ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ, ಬಾಲನೆ- ಮೊಆಲನೆ, ಪೌಷ್ಟಿಕ ಆಹಾರ, ಶಾಲಾಪೂರ್ವ ಶಿಕ್ಷಣ ಇತ್ಯಾದಿ ಸೇವೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಇದೀಗ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ರಲ್ಲಿ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆಯೊ ಅದೇ ಪ್ರದೇಶಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಶಲಾಪೂರ್ವ ತರಗತಿಗಳನ್ನು ಪ್ರಾರಂಭಿಸಲು ಗನವಾಡಿ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವಾಗ ಅದಕ್ಕೆ ಪರ್ಯಾಯವಾಗಿ ಬೇರೆ ಬೇರೆ ಇಲಾಖೆಗಳು ಶಿಶುಪಾಲನಾ ಕೇಂದ್ರ ಮತ್ತು ಶಾಲಾಪೂರ್ವ ತರಗತಿಗಳನ್ನು ಪ್ರಾಂಭಿಸಿದರೆ, ಅನಗತ್ಯವಾಗಿ ಸರ್ಕರದ ಹಣ ಪೋಲುಗೊಳಿಸುತ್ತಿರುವ ಧೋರಣೆ ಸರಿಯಾದುದಲ್ಲ.
ಆರನೇ ಗ್ಯಾರಂಟಿ ಜಾರಿಗೊಳಿಸಿ:- ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿ ಶ್ರೀಮತಿ ಪ್ರಿಯಾಂಕ ಗಾಂಧಿಯವರು ಬೆಳಗಾವಿ ಜಿಲ್ಲೆಯು ಖಾನಾಪುರದಲ್ಲಿ ಅಂಗನವಾಡಿ ಸಂಘಟನೆಯ ನಾಯಕರೊಂದಿಗೆ ನಾಯಕರೊಂದಿಗೆ ಸಮಾಲೋಚಿಸಿ ಗೌರವಧನವನ್ನು ಕಾರ್ಯಕರ್ತಯರಿಗೆ 15 ಸಾವಿರ, ಸಹಾಯಕೀಯರಿಗೆ 10 ಸಾವಿರ ಹೆಚ್ಚಿಸುವ ಹಾಗೂ ನಿವೃತ್ತರಿಗೆ ಇಡುಗಂಟು 3 ಲಕ್ಷ ರೂಪಾಯಿ ನೀಡುವ ಭರವಸೆಯನ್ನು ಸರ್ಕಾರದ ನೇ ಗ್ಯಾರಂಟಿಯಾಗಿ ಘೋಷಿಸಿದ್ದು ಇದನ್ನು ರಾಜ್ಯ ಸರ್ಕಾರ ಕೂಡಲೇ ಘೋಷಿಸಿರುವ ಭರವಸೆಯನ್ನು ಈಡೇರಿಸಲು ಕ್ರಮವಹಿಸಬೇಕೆಂದು ಒತ್ತಾಯಿಸುತ್ತೇವೆ ಎಂದು ಮನವಿ ಸಲ್ಲಿಸಿದರು