ಗಾಯಗಳುಗಳ ಆರೋಗ್ಯ ವಿಚಾರಿಸಿದ ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ ಸುವರ್ಣ ವಿಧಾನ ಸೌಧದ ಬಳಿ ಕೆಕೆ ಕೊಪ್ಪ ಗ್ರಾಮಕ್ಕೆ ತೆರಳುವ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವಿಷಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಗಮನಕ್ಕೆ ಬಂದ ತಕ್ಷಣ ಆಸ್ಪತ್ರೆಗೆ ತೆರಳಿ, ಗಾಯಾಳುಗಳ ಆರೋಗ್ಯದ ಸ್ಥಿತಿಯನ್ನು ವಿಚಾರಿಸಿ, ಎಲ್ಲರಿಗೂ ಧೈರ್ಯವನ್ನು ತುಂಬಿದರು. ಜೊತೆಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಿರಿ ಎಂದು ವೈದ್ಯಾಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.