ದೇಶ

ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ..! 

ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಮತ್ತೆ ಭಾರೀ ಹಿನ್ನಡೆ
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಮತ್ತೆ ಭಾರೀ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿ ಪಾತ್ರದ ಅಣೆಕಟ್ಟುಗಳಿಂದ ಹರಿಸಲು ಕಾವೇರಿ ನೀರು ನಿಯಂತ್ರಣಾ ಸಮಿತಿ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಾಲಯದ ಈ ತೀರ್ಪಿನಿಂದಾಗಿ ಕರ್ನಾಟಕಕ್ಕೆ ತೀವ್ರ ಸಂಕಷ್ಟ ಎದುರಾಗಿದ್ದು, ನೀರಿನ ಕೊರತೆಯ ನಡುವೆಯೂ ತಮಿಳುನಾಡಿಗೆ ನೀರು ಹರಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಕಾವೇರಿ ನೀರು ನಿಯಂತ್ರಣಾ ಸಮಿತಿ (ಸಿಡಬ್ಲ್ಯೂಆರ್‍ಸಿ) ಆದೇಶವನ್ನು ಎತ್ತಿಹಿಡಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಪಿ.ಎಸ್.ನರಸಿಂಹ ಹಾಗೂ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠ ಸಿಡಬ್ಲ್ಯೂಆರ್‍ಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಈ ಹಿಂದೆ ಹೊರಡಿಸಿರುವ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸಬೇಕು ಹಾಗೂ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಬೇಕು. ನೀರು ಹಂಚಿಕೆಯ ಬೆಳವಣಿಗೆಗಳ ಮೇಲೆ ಪೀಠ ಖುದ್ದು ನಿಗಾ ವಹಿಸಲಿದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
TV24 News Desk
the authorTV24 News Desk

Leave a Reply