ಬೆಂಗಳೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಸರಗೊಂಡು ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರು ಅಪಾರ್ಟ್ಮೆಂಟ್ ಕಟ್ಟಡದ 9 ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರ್ತೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದಿಶಾ ಅಪಾರ್ಟ್ಮೆಂಟ್ ನ ನಿವಾಸಿ ಉಪಾಸನಾ ರಾವತ್ (30) ಮೃತ ದುರ್ದೈವಿಯಾಗಿದ್ಧಾರೆ. ಈ ಘಟನೆ ಸಂಬಂಧ ಮೃತಳ ಪತಿ ನಿಹಾರ್ ರಂಜನ್ ರಾವತ್ನನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ. ಕೌಟುಂಬಿಕ ವಿಚಾರದಿಂದ ಜಗಳವಾಗಿ ಇದರಿಂದ ಬೇಸತ್ತು, ಅಪಾರ್ಟ್ಮೆಂಟ್ ಕಟ್ಟಡದ 9 ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಪೊಲೀಸರು ತಿಳಿಸಿದ್ಧಾರೆ. 9ವರ್ಷಗಳ ಹಿಂದೆ ನಿಹಾರ್ ರಂಜನ್ ರಾವತ್ ಹಾಗೂ ಉಪಾಸನಾ ರಾವತ್ ವಿವಾಹವಾಗಿದ್ದು, ಅಪಾರ್ಟ್ಮೆಂಟ್ ನಲ್ಲಿ ದಂಪತಿ ನೆಲೆಸಿದ್ದರು. ಇಬ್ಬರು ಖಾಸಗಿ ಕಂಪನಿಯ ಉದ್ಯೋಗಿಗಳಾಗಿದ್ದರು. ಸಂತಾನ ಇಲ್ಲದ ಕಾರಣ ಇಬ್ಬರ ಮಧ್ಯೆ ಮನಸ್ತಾಪ ಬಂದಿದ್ದು, ವಿಚ್ಷೇದನ ಪಡೆಯಲು ಮುಂದಾಗಿದ್ದರು. ಈ ಹಿನ್ನೆಲೆ ಉಪಾಸನಾ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ.