ಬೆಳಗಾವಿ :ನಗರದ ಕೋಟೆ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯಲ್ಲಿ ಗುತ್ತಿಗೆದಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮುಖ್ಯ ಕಾರ್ಯನಿರ್ವಾಹಕ ಅಭಿಯಂತರ S.S.ಸೊಬರದ ಮುಂದೆ ಗುತ್ತಿಗೆದಾರ ನಾಗಪ್ಪ ಬಂಗಿ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರ ಸೊಬರದ ರಸ್ತೆ ನಿರ್ವಹಣೆ ಬಿಲ್ ಮಂಜೂರು ಮಾಡದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಗುತ್ತಿಗೆದಾರ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ನಾಗಪ್ಪ ಬಂಗಿ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ, ಸದ್ಯ ನಾಗಪ್ಪ ಬಂಗಿ ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.