ಧಾರವಾಡ

ಬೈಕ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ..! 

ಧಾರವಾಡ: ನಗರದಿಂದ ಬಾಡ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಧಾರವಾಡ ಹಳಿಯಾಳ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಸೇತುವೆ ಬಳಿ ನಡೆದಿದೆ. ರಜಾಕ್ ಕವಲಗೇರಿ (48) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ಬಾಡ್ ಗ್ರಾಮದ ನಿವಾಸಿ ರಜಾಕ್ ಎಂದು ಹೇಳಲಾಗಿದೆ. ರಜಾಕ್, ಬಾಡ್ ಗ್ರಾಮದ ಮನೆಗೆ ಬೈಕನಲ್ಲಿ ತೆರಳುತ್ತಿದ್ದ. ರಜಾಕ್‌ನ ಬೈಕ್‌ ಅಡ್ಡಗಟ್ಟಿ ಹತ್ಯೆ ಮಾಡಿ ದುಷ್ಕರ್ಮಿಗಳು ಎಸ್ಕೆಪ್ ಆಗಿದ್ದಾರೆ. ಮಾರಕಾಸ್ತ್ರಗಳಿಂದ ಮನಸೋ ಇಚ್ಚೆ ದಾಳಿ ಮಾಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
TV24 News Desk
the authorTV24 News Desk

Leave a Reply