ಘಟಪ್ರಭಾ: ಹನಿಟ್ರ್ಯಾಪ್, ಸುಲಿಗೆ ಆರೋಪದಡಿ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಘಟನೆ ತಾಲೂಕಿನ ಘಟಪ್ರಭಾ ಪಟ್ಟಣದ ಜಯಮೃತ್ಯುಂಜಯ ಸರ್ಕಲ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಘಟಪ್ರಭಾ ಮೂಲದ ಶ್ರೀದೇವಿ ಗೊಡಚಿ ಎಂಬ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಶ್ರೀದೇವಿ ಮೇಲೆ ಹನಿಟ್ರ್ಯಾಪ್ ಹಾಗೂ ಬ್ಲಾಕಮೇಲ್, ಸುಲಿಗೆ ಮಾಡುತ್ತಿದ್ದಾರೆ ಎಂದು ಸ್ಥಳೀಯರ ಆರೋಪವಾಗಿದೆ.
ಇನ್ನು ಕೆಲ ದಿನಗಳ ಹಿಂದೆ ಎಸ್ಪಿಗೂ ಶ್ರೀದೇವಿಯ ಕಿರುಕುಳದ ಬಗ್ಗೆ ಸ್ಥಳೀಯರು ಮನವಿ ನೀಡಿದ್ದರು.
ಆದರೆ ಮಹಿಳೆಗೆ ಚಪಲಿ ಹಾರಾ ಹಾಕಿ ಮೆರವಣಿಗೆ ಮಾಡಿದ್ದು ಎಷ್ಟು ಸರಿ.? ಕಾನೂನು ಕೈಗೆತ್ತಿಕೊಂಡವರ ವಿರುದ್ಧವೂ ಕ್ರಮವಾಗಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.