ಬೆಳಗಾವಿ

ಅಂತಾರಾಜ್ಯ ಹುಲಿ ಬೇಟೆಗಾರನ ಬಂಧನ..!  

ಖಾನಾಪುರ: ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಅಭಯಾರಣ್ಯಗಳಲ್ಲಿ ಹುಲಿಗಳನ್ನು ಬೇಟೆಯಾಡಿ ಅದರ ದೇಹದ ಭಾಗಗಳನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಬೇಟೆಗಾರನನ್ನು ಖಾನಾಪುರ ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಬಂಧಿಸಿದ್ದಾರೆ.
ಮಧ್ಯಪ್ರದೇಶ ರಾಜ್ಯದ ದಾಮೋ ಜಿಲ್ಲೆಯ ಅಂತಾರಾಜ್ಯ ಹುಲಿ ಬೇಟೆಗಾರ ಚಿಕಾ ಅಲಿಯಾಸ್ ಕೃಷ್ಣಾ ಪಟ್ಟೆ ಪವಾರ್ ಬಂಧಿತ ಆರೋಪಿ. ಇತನ ವರ್ತನೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ವಲಯ ಅರಣ್ಯ ಅಧಿಕಾರಿ ನಾಗರಾಜ ಅವರಿಗೆ ಆತನ ಬಗ್ಗೆ ಅನುಮಾನಗೊಂಡು ತೀವ್ರ ವಿಚಾರಣೆ ನಡೆಸಿದಾಗ ಆತ ಇದುವರೆಗೂ ದೇಶದ ವಿವಿಧ ಭಾಗಗಳಲ್ಲಿ ಹುಲಿಗಳನ್ನು ಬೇಟೆಯಾಡಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಳಿಕ ಆತನ ಕುರಿತು ಇಲಾಖೆಯಲ್ಲಿ ಮಾಹಿತಿ ಸಂಗ್ರಹಿಸಿದಾಗ ಆತ ನಡೆಸಿದ ಹುಲಿ ಬೇಟೆ ಹಾಗೂ ಇತರೆ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜೊತೆಗೆ ಈತನ ಮೇಲೆ ಈಗಾಗಲೇ ಮಹಾರಾಷ್ಟ್ರ ರಾಜ್ಯದ ಅಮರಾವತಿ ಜಿಲ್ಲೆಯ ಮೇಲಘಾಟ್ ಅರಣ್ಯದಲ್ಲಿ ಹುಲಿ, ಕರಡಿಗಳನ್ನು ಬೇಟೆಯಾಡಿರುವ ಪ್ರಕರಣಗಳಿವೆ ಹಾಗೂ ಕೆಲ ವರ್ಷಗಳ ಹಿಂದೆ ಮೃತಪಟ್ಟ ಕುಖ್ಯಾತ ಹುಲಿ ಬೇಟೆಗಾರ ಸಂಸಾ ಚಂದ್ ತಂಡದ ಸದಸ್ಯನಾಗಿ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಬೆಳಗಾವಿ ಉಪಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ಕಲ್ಲೋಳಿಕರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಖಾನಾಪುರ ವಲಯ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಯ ತಂಡ ಆರೋಪಿ ಕೃಷ್ಣಾನನ್ನು ಬಂಧಿಸಿದ್ದು, ಬಂಧಿತನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
TV24 News Desk
the authorTV24 News Desk

Leave a Reply