ಬೆಳಗಾವಿ

ರೈತರಿಗೆ ವಿದ್ಯುತ್ ಶಾಕ್ ನೀಡಿದ ಶಾಸಕ ಸವದಿ..! 

ಬೆಳಗಾವಿ: ವಾರದಲ್ಲಿ ಒಂದು ದಿನ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲು ಚಿಂತನೆ ನಡೆದಿದೆ. ರೈತರು ಸಹಕರಿಸಬೇಕು ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಅಥಣಿ ತಾಲೂಕಿನ ನಾಗನೂರು ಪಿಕೆ ಗ್ರಾಮದಲ್ಲಿ ಮಾತನಾಡಿರುವ ಅವರು, ಕೃಷ್ಣಾ ನದಿ ದಂಡೆಯ ವಿದ್ಯುತ್‌ ಕಡಿತಕ್ಕೆ ಚಿಂತನೆ ನಡೆದಿದ್ದು, ಬೇಸಿಗೆ ಸಂದರ್ಭದಲ್ಲಿ ನೀರು ಉಳಿವಿಗಾಗಿ ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆಸಿದೆ. ಆದ್ದರಿಂದ ಈ ನಿರ್ಧಾರಕ್ಕೆ ರೈತರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಈಗಾಗಲೇ ಬೆಳೆನಷ್ಟವಾಗಿ ರೈತರು ಬದುಕುವುದು ದುಸ್ತರವಾಗಿದೆ. ಇತ್ತ ಪರಿಹಾರ ಧನವೂ ನೀಡುತ್ತಿಲ್ಲ. ಹೀಗಿರುವಾಗ ಮತ್ತೆ ವಿದ್ಯುತ್ ಕಡಿತ ಮಾಡುವ ಚಿಂತನೆ ನಡೆಸಿರುವುದಕ್ಕೆ ರೈತರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
TV24 News Desk
the authorTV24 News Desk

Leave a Reply