ಗದಗ: ಜಿಲ್ಲೆ ನೆರೇಗಲ್ ಪಟ್ಟಣದ ಹೊರ ವಲಯ ಗದ್ದಿಹಳ್ಳದ ಬಳಿ ಕೆಎಸ್ಆರ್ಟಿಸಿ ಬಸ್, ಟಾಟಾ ಸೊಮೊ ಮಧ್ಯೆ ಮುಖಾ ಮುಖಿ ಡಿಕ್ಕಿಯಾಗಿದೆ.
ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಹೊರಟಿದ್ದ ಟಾಟಾ ಸೊಮೊ ಹಾಗೂ ಗದಗ ನಗರದಿಂದ ಗಜೇಂದ್ರಗಡ ಕಡೆಗೆ ಹೊರಟಿದ್ದ ಬಸ್ ನಡುವೆ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದಾರೆ.
ವಾಯುವ್ಯ ಸಾರಿಗೆ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಕಲಬುರಗಿಯಿಂದ ಟಾಟಾ ಸೊಮೊ ಹತ್ತಿಕೊಂಡು ಹೊರಟಿದ್ದ ಪ್ರಯಾಣಿಕರು ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್ಗೆ ಡಿಕ್ಕಿ ಹೊಡೆದಿದ್ದು, ದೇವಸ್ಥಾನಕ್ಕೆ ಹೊರಟವರು ಮಸಣ ಸೇರಿದ್ದಾರೆ.
ಇನ್ನು ಅಪಘಾತ ಘಟನೆಯಿಂದ ರಸ್ತೆಯಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನು ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳ ಪರಿಶೀಲನೆ ಮಾಡಿ ಟ್ರಾಫಿಕ್ ಜಾಮ್ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಅಪಘಾತ ಘಟನೆಯ ನಂತರ ಬಸ್ನಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ನರಳಾಡುತ್ತಿದ್ದ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಅವಘಡ ನಡೆಸ ಸ್ಥಳದಲ್ಲಿ ನೆರೇಗಲ್ ಪೊಲೀಸರು ಮೊಕ್ಕಾ ಹೂಡಿದ್ದು, ಮೃತದೇಹ ಪತ್ತೆಗೆ ಮುಂದಾಗಿದ್ದಾರೆ.
ಟಾಟಾ ಸುಮೋ ಸಂಪೂರ್ಣ ಜಖಂ ಆಗಿದ್ದು, ಮೃತ ದೇಹಗಳನ್ನು ಹೊರಗೆ ತೆಗೆಯಲು ಪರದಾಡುತ್ತಿದ್ದಾರೆ. ಪ್ರವಾಸಕ್ಕೆ ಬಂದವರ ಬ್ಯಾಗ್ ಹಾಗೂ
ಅಡಕೆ ಆಕಾರಗಳ ಮೂಲ ಅಮಕ ಗುರುತು ಎಡೆಗೆ ಮುಂಗಾರಿಗಾದೆ