ರಾಜ್ಯ

ಶೆಟ್ಟರ-ಸಾವಕಾರ ರಹಸ್ಯ ಭೇಟಿ ಡಿಕೆಶಿ ಏನಂದ್ರು..?  

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಾಯಕರು ಹುನ್ನಾರ ನಡೆಸುತ್ತಿದ್ದಾರೆ, ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ ಏನೆಲ್ಲಾ ಆಮಿಷವೊಡ್ಡುತ್ತಿದ್ದಾರೆ ಎಂಬುದನ್ನು ಖುದ್ದು ಶಾಸಕರಿಂದಲೇ ಹೇಳಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರ್ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗುವುದಿಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ ಎಂದರು.
ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ತಮಗೆ ಎಲ್ಲಾ ಗೊತ್ತಿದೆ ನನಗೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಸಿಎಂಗೆ ದೂರು ನೀಡುತ್ತಿದ್ದಾರೆ. ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನ ನಡೆದ ವೇಳೆ ನಮ್ಮ ಶಾಸಕರಿಂದಲೇ ಹೇಳಿಸುತ್ತೇನೆ ಎಂದು ಹೇಳಿದರು.
TV24 News Desk
the authorTV24 News Desk

Leave a Reply