ಬೈಲಹೊಂಗಲ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಧ್ವಜಸ್ತಂಭ ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪ್ರಜ್ವಲ್ ಚನ್ನಗೌಡ ಮುನೇಪ್ಪನವರ (18) ಮೃತಪಟ್ಟ ಯುವಕ. ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿಲ್ಲಿಸಲು ತಯಾರಿ ನಡೆಸುತ್ತಿದ್ದಾಗ ವಿದ್ಯುತ್ ತಂತಿ ತಾಗಿದ್ದರಿಂದ ಪ್ರಜ್ವಲ್ ಸಾವನ್ನಪ್ಪಿದ್ದಾನೆ.
ವಿದ್ಯುತ್ ಶಾಕ್ ತಗುಲಿದ ತಕ್ಷಣ ಸ್ಥಳೀಯರು ಯುವಕನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.