ಪವರ್ ರ್ ಪುನೀತ್ ರಾಜ್ ಕುಮಾರ್ ೨ನೇ ಪುಣ್ಯಸ್ಮರಣೆ
ಇಂದು ಅಕ್ಟೋಬರ್ 29 ಕನ್ನಡಿಗರಿಗೆ ಭರಿಸಲಾಗದ ನೋವು ಕೊಟ್ಟ ದಿನ. ಚಿತ್ರರಂಗಕ್ಕೆ ತುಂಬಲಾರದ ನಷ್ಟವಾದ ದಿನ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದೈಹಿಕವಾಗಿ ದೂರವಾಗಿ ಎರಡು ವರ್ಷ ಆಗ್ತಿದೆ.ಎರಡನೇ ವರ್ಷದ ಪುಣ್ಯಸ್ಮರಣೆಗೆ ಅಪ್ಪು ಸ್ಮಾರಕ ರೆಡಿಯಾಗಿದೆ. ಅನ್ನದಾನ, ರಕ್ತದಾನ, ನೇತ್ರದಾನದ ಕ್ಯಾಂಪ್ ಮಾಡುತ್ತಿದ್ದಾರೆ ಅಭಿಮಾನಿಗಳು. ದೂರದ ಊರುಗಳಿಂದ ಅಭಿಮಾನಿ ದೇವರುಗಳು ಅಪ್ಪುನ ನೋಡಲು ಈಗಾಗ್ಲೇ ಹೊರಟಿದ್ದಾರೆ. ಅಪ್ಪು ನಮನ ಮತ್ತು ಪ್ರೀತಿಯ ಧ್ಯಾನ ಮಾಡಲು ಮಧ್ಯರಾತ್ರಿಯಿಂದ ಶುರುವಾಗಿದೆ.
ದೊಡ್ಮನೆ ಸದಸ್ಯರು ಅಪ್ಪು ಸ್ಮಾರಕಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಕುಟುಂಬದವರ ಪೂಜೆ ಬಳಿಕ ಅಭಿಮಾನಿ ದೇವರುಗಳು ಅಪ್ಪುಗೆ ನಮಿಸಲಿದ್ದಾರೆ. ಕೈ ಮುಗಿದು ಸ್ಮರಿಸಲಿದ್ದಾರೆ. ಹಬ್ಬದಂತೆ ಜನ ಆ ಜಾಗದಲ್ಲಿ ಸೇರುತ್ತಾರೆ. ಹೂವು ಹಾಕಿ ಅಲಂಕಾರ ಮಾಡಿ ಕಣ್ಣುತುಂಬಿಕೊಳ್ತಾರೆ.
ರಕ್ತದಾನ ಶಿಬಿರ, ಅನ್ನದಾನ: ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಕಂಠೀರವ ಸ್ಟುಡಿಯೋಗೆ ಜನ ಸಾಗರವೇ ಹರಿದು ಬರ್ತಿದೆ. ಅಭಿಮಾನಿಗಳು ಆರಾಧ್ಯ ದೈವ ಪುನೀತ್ ರಾಜ್ಕುಮಾರ್ ಪುಣ್ಯ ಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ರಕ್ತದಾನ ಶಿಬಿರ ನೇತ್ರ ತಪಾಸಣೆ ಇರಲಿದೆ. ಇನ್ನು ಇಡೀ ದಿನ ರಾಜ್ ಕುಟುಂಬಸ್ಥರು ಅನ್ನದಾನ ಮಾಡುತ್ತಿದ್ದಾರೆ.
ರಾಜ್ ಕುಟುಂಬದಿಂದ ಸ್ಮಾರಕ ನಿರ್ಮಾಣ: ಪುನೀತ್ ರಾಜ್ ಕುಮಾರ್ ಎಲ್ಲರನ್ನು ಅಗಲಿ 2 ವರ್ಷ ಕಳೆದು ಹೋಗಿದೆ. ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. 2ನೇ ವರ್ಷದ ಪುಣ್ಯಸ್ಮರಣೆಗೆ ಅಪ್ಪು ಸಮಾಧಿ ನಿರ್ಮಾಣ ಮಾಡಲಾಗಿದೆ. ರಾಜ್ ಕುಟುಂಬಸ್ಥರು ಸಮಾಧಿ ನಿರ್ಮಿಸಿದ್ದಾರೆ.