ತೆಲಂಗಾಣ ಚುನಾವಣೆ ಹಿನ್ನೆಲೆ ಸಚಿವ ಜಮೀರ್ ಅಹ್ಮದ್ ಖಾನ್ ತಂಗಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.
ಹೈದರಾಬಾದ್ ಪಾರ್ಕ್ ಹಟ್ ಹೋಟೆಲ್ ಮೇಲೆ ಈ ದಾಳಿ ನಡೆದಿದೆ. ತಡರಾತ್ರಿ ರೇಡ್ ಮಾಡಿದ್ದಕ್ಕೆ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಳಿ ನಡೆಸಿ ಯಾವುದೇ ಕುರುಹು ಇಲ್ಲದೆ ಪೊಲೀಸರು ಹಿಂತಿರುಗಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಹಾಗೂ ಬಿಎಸ್ಆರ್ ಸೋಲುವ ಭಯದಿಂದ ದಾಳಿ ಮಾಡಿಸಿದೆ ಎಂದು ಜಮೀರ್ ಆರೋಪಿಸಿದ್ದಾರೆ.