Uncategorizedಬೆಳಗಾವಿ

ಕನ್ನಡ ಧ್ವಜ : ಯುವಕರನ್ನು ಥಳಿಸಿದ ಪುಂಡರು..! 

ಹುಕ್ಕೇರಿ: ಕನ್ನಡ ಧ್ವಜ ತೆಗೆಯುವಂತೆ ಕನ್ನಡಿಗರ ಮೇಲೆ ಹಲ್ಲೆ ನಡೆದಿರುವ ಘಟನೆ ಅಂಕಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಶಿವಾಜಿ ಪುತ್ಥಳಿ  ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆಗೆಯುವಂತೆ ಕೆಲ ಪುಂಡರು ಗಲಾಟೆ ಮಾಡಿದ್ದಾರೆ. ಈ ವೇಳೆ ಬಸವರಾಜ್ ಪಾಟೀಲ್ ಹಾಗೂ ಶುಭಂ ಕಿವುಂಡಾ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಕಿಡಿಗೇಡಿಗಳು ಕನ್ನಡಿಗರ ಮೇಲೆ ಹಲ್ಲೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್  ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಅಂಗತ ಕರಮೆ, ಅನಿಕೇತ್ ಕರಮೆ, ಶಾಹು ಮಗದುಮ್ ಸೇರಿದಂತೆ ಐವರ ವಿರುದ್ಧ ಹಲ್ಲೆಯ ಆರೋಪ ಕೇಳಿ ಬಂದಿದೆ. ಘಟನೆ ಸಂಬಂಧ ಐವರ ವಿರುದ್ಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು, ಇನ್ನುಳಿದ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ.
TV24 News Desk
the authorTV24 News Desk

Leave a Reply