ಬೆಳಗಾವಿ

DD. ಎ.ಎಂ.ಬಸವರಾಜು ಸೇವೆಯಿಂದ ಅಮಾನತು 

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾಗಿ ಈ ಹಿಂದೆ ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಮೊದಲಾದ ಆರೋಪಗಳು ಸಹ ಇವರ ಮೇಲಿದೆ.ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್ ಬಸವರಾಜು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಅಲ್ಲದೇ ಕಚೇರಿ ಸಮಯ ಮುಗಿದ ನಂತರವೂ ಅವಶ್ಯಕತೆ ಇಲ್ಲದಿದ್ದರೂ ಮಹಿಳಾ ಸಿಬ್ಬಂದಿಗಳನ್ನು ರಾತ್ರಿ 8-9 ಗಂಟೆವರೆಗೆ ಕಚೇರಿಯಲ್ಲಿ ಉಳಿಯುವಂತೆ ಆದೇಶಿಸಿದ್ದರು. ಮನೆಗೆ ಹೋದ ಬಳಿಕವೂ ಸಿಬ್ಬಂದಿಗಳಿಗೆ ರಾತ್ರಿ 10-11 ಗಂಟೆಗೆ ಕರೆ ಮಾಡಿ ಕೆಲಸ
ಹೇಳುತ್ತಿದ್ದರು. ಇಲಾಖೆಯ ಕಾರ್ಯಕ್ರಮ ನಡೆಯುತ್ತಿದ್ದಾಗ ಬೇರೆ ಇಲಾಖೆ ಅಧಿಕಾರಿಗಳ ಎದುರಿಗೆ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳನ್ನು ಕೆಟ್ಟ ಶಬ್ದಗಳಿಂದ ಬೈದು ಅವಮಾನಿಸುತ್ತಿದ್ದರು.
ಅಲ್ಲದೇ ಚಿಕ್ಕೋಡಿ ಸಂಸದ ಅಣ್ಣಸಾಹೇಬ ಜೊಲ್ಲೆ ಸೇರಿದಂತೆ ಹಲವರು ಎ.ಎಂ.ಬಸವರಾಜು ವಿರುದ್ಧ ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದರು. ಮಾತ್ರವಲ್ಲ ಬಸವರಾಜು ಅವರನ್ನು ಬೆಳಗಾವಿ ಜಿಲ್ಲೆಯಿಂದ ಬೇರೆಕಡೆಗೆ ವರ್ಗಾವಣೆ ಮಾಡಬಹುದಾಗಿದೆ ಅಥವಾ ಚುನಾವಣಾ ಕರ್ತವ್ಯದಿಂದ ನಿರ್ಭಂದಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದರು.
ಇತ್ತೀಚೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಮತ್ತೆ ಬೆಳಗಾವಿಗೆ ಆಗಮಿಸಿ ಹಾಲಿ ಉಪನಿರ್ದೇಶಕ ನಾಗರಾಜ ಅವರು ಸುವರ್ಣ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತನಗೆ ಕಾರ್ಯಾಲಯದಿಂದ ಆದೇಶವಾಗಿದೆ ಎಂದು ಹೇಳಿ ಕಚೇರಿಗೆ ಹಾಜರಾಗಿ ಸಿಬ್ಬಂದಿಯನ್ನು ಅವಾಚ್ಯವಾಗಿ ಬೈದು, ಅನುಚಿತವಾಗಿ ವರ್ತಿಸಿದ್ದರು ಎನ್ನುವ ಆರೋಪ ಬಸವರಾಜು ಮೇಲಿದೆ. ಪರಿಶಿಷ್ಟ ಜಾತಿಯ ನೌಕರರಿಗೆ ಜಾತಿ ನಿಂದನೆ ಮಾಡಿದ ಆರೋಪ, ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಮೊದಲಾದ ಆರೋಪಗಳು ಸಹ ಇವರ ಮೇಲಿದೆ.ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್ ಬಸವರಾಜು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
TV24 News Desk
the authorTV24 News Desk

Leave a Reply