ರಾಜ್ಯ

ನಾಳೆ ರಜೆ ಘೋಷಣೆ ಬಿಜೆಪಿ ನಾಯಕರ ಒತ್ತಾಯ

ಸಿದ್ದರಾಮಯ್ಯ  ಭಯಗೊಂಡು ರಜೆ ನೀಡುತ್ತಿಲ್ಲ:ಡಿ.ವಿ.ಸದಾನಂದಗೌಡ
ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ಬಾಲ ರಾಮಮೂರ್ತಿ ಪ್ರಾಣಪ್ರತಿಷ್ಠಾಪನೆ ನಾಳೆ ನಡೆಯಲಿದ್ದು, ರಾಜ್ಯ ಸರ್ಕಾರ ಸ್ವಯಂ ಪ್ರೇರಣೆಯಿದ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ನಾಯಕರಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಯಾವುದೇ ಪೂರ್ವಪರ ಯೋಚಿಸದೆ ಸ್ವಪಕ್ಷೀಯರ ಮಾತು ಕೇಳದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ರಾಜ್ಯಾದ್ಯಂತ ರಜೆ ಘೋಷಿಸಬೇಕೆಂದು ಆಗ್ರಹಿಸಿದರು.
 
ರಾಮ ಮಂದಿರ ನಿರ್ಮಾಣದಿಂದ ಸಿದ್ದರಾಮಯ್ಯ ಅವರು ವಿಚಲಿತರಾಗಿದ್ದಾರೆ. ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆಯಿಂದ ಸಿದ್ದರಾಮಯ್ಯ ಅವರು ಭಯಗೊಂಡು ರಜೆ ನೀಡುತ್ತಿಲ್ಲವೇನೊ ಎಂದು ಅವರು ಪ್ರಶ್ನಿಸಿದರು. ರಾಜ್ಯಪಾಲರ ಒತ್ತಡದಿಂದ ಪೊಲೀಸರು ಹರಿಪ್ರಸಾದ್ ಅವರನ್ನು ವಿಚಾರಣೆ ಮಾಡಿದ್ದಾರೆಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸದಾನಂದಗೌಡ ಅವರು, ಸಂವಿಧಾನಬದ್ದ ಸ್ಥಾನಗಳ ಬಗ್ಗೆ ನಾವು ಮಾತನಾಡುವುದು ಸರಿಯಲ್ಲ. ಅವರ ಪಕ್ಷದವರೇ ಹರಿಪ್ರಸಾದ್ ಹೇಳಿಕೆ ಸರಿಯಲ್ಲ ಎಂದಿದ್ದಾರೆ. ಒಂದು ವೇಳೆ ನಾಳೆ ಏನಾದರೂ ಗಲಾಟೆಯಾದರೆ ಸರ್ಕಾರ ಕಾರಣವೇ ಹೊರತು ಹರಿಪ್ರಸಾದ್ ಅಲ್ಲ. ಈ ಬಗ್ಗೆ ಮುಖ್ಯಮಂತ್ರಿ ಗಮನಹರಿಸಬೇಕಿದೆ ಎಂದರು.
TV24 News Desk
the authorTV24 News Desk

Leave a Reply