ಬೆಳಗಾವಿಬೆಳಗಾವಿ ನಗರ

ಮಾಜಿ ಸಿಎಂ ಜಗದೀಶ್ ಶೆಟ್ಟರಗೆ ಟಿಕೆಟ್ ಮಿಸ್..?

ಬೆಳಗಾವಿ ಲೋಕ ಸಮರಕ್ಕೆ ಹೊಸ ಅಭ್ಯರ್ಥಿ ಫಿಕ್ಸ್ ..?

ಗಡಿ ಜಿಲ್ಲೆ ಬೆಳಗಾವಿಗೆ ಫೈರ್ ಬ್ರ್ಯಾಂಡ್ ಯತ್ನಾಳ್ ಎಂಟ್ರಿ..!

ಬೆಳಗಾವಿ ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಟಿಕೆಟ್ ಪಡೆಯಲು ಕೊನೆಯ ಹಂತದ ಕಸರತ್ತು ನಡೆಯುತ್ತಿದೆ. ಇತ್ತ ಬೆಳಗಾವಿ ಕೆಲ ಸ್ಥಳೀಯ ಬಿಜೆಪಿ ನಾಯಕರಿಂದ ಟಿಕೆಟ್ ತಪ್ಪಿಸುವ ಕಸರತ್ತು ನಡೆಯುತ್ತಿದೆ. ಮಂಗಳವಾರ ದೆಹಲಿ ಭೇಟಿ ಮಾಡಿ ಬಂದ ಜಗದೀಶ್ ಶೆಟ್ಟರ್
ಬೆಳಗಾವಿ ಟಿಕೆಟ್ ವಿಚಾರವಾಗಿ ಬೆಳಗಾವಿಗೆ ತೆರಳಿ ಮರಳಿ ಹುಬ್ಬಳ್ಳಿಗೆ ಬಂದ ಜಗದೀಶ್ ಶೆಟ್ಟರ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಚುನಾವಣಾ ಸಮಿತಿ ಸಭೆ ಬುಧವಾರ ಇಲ್ಲವೇ ಗುರುವಾರ ನಡೆಯಲಿದೆ. ಈ ವೇಳೆ ಬೆಳಗಾವಿ ಟಿಕೆಟ್ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಬಿಎಲ್ ಸಂತೋಷ್ ತಂತ್ರಗಾರಿಕೆ?
ಈ ಹಿಂದೆ ಕಾಂಗ್ರೆಸ್ ಸೇರ್ಪಡೆಯಾದ ಸಂದರ್ಭದಲ್ಲಿ ಬಿಎಲ್ ಸಂತೋಷ್ ವಿರುದ್ಧ ಜಗದೀಶ್ ಶೆಟ್ಟರ್ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು. ತಮಗೆ ವಿಧಾನಸಭಾ ಚುನಾವಣೆ ಟಿಕೆಟ್ ತಪ್ಪಲು ಸಂತೋಷ್ ಕಾರಣ ಎಂದು ಆರೋಪಿಸಿದ್ದರು.
ಇದೀಗ ಪಕ್ಷಕ್ಕೆ ಹಿಂದಿರುಗಿ ಬಂದರೂ ಬಿಎಲ್ ಸಂತೋಷ್ ಮತ್ತು ಜಗದೀಶ್ ಶೆಟ್ಟರ್ ನಡುವಿನ ರಾಜಕೀಯ ನಂಟು ಅಷ್ಟಕಷ್ಟೇ ಎಂಬ ಮಾತುಗಳಿವೆ. ಈ ಹಿನ್ನೆಲೆ ಬೆಳಗಾವಿಗೆ ಹೊಸ ಅಭ್ಯರ್ಥಿಯ ಹೆಸರನ್ನು ಮುನ್ನಲೆಗೆ ತಂದಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯ ನಾಯಕರಿಂದಲೂ ವಿರೋಧ ವ್ಯಕ್ತವಾಗಿರೋದನ್ನು ಗಮನದಲ್ಲಿಟ್ಟುಕೊಂಡು ಬಸನಗೌಡ ಪಾಟೀಲ್ ಯತ್ನಾಳ್​ ಹೆಸರನ್ನು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಬಿಎಲ್ ಸಂತೋಷ್ ತಂತ್ರಗಾರಿಕೆ ತಿಳಿಯುತ್ತಲೇ ಅಲರ್ಟ್ ಆಗಿರೋ ಜಗದೀಶ್ ಶೆಟ್ಟರ್ ದೆಹಲಿಗೆ ತೆರಳಿದ್ದಾರೆ.

ಹುಬ್ಬಳ್ಳಿಯಲ್ಲಿ ಶೆಟ್ಟರ್ ಆಪ್ತರೊಂದಿಗೆ ಗೌಪ್ಯ ಸಭೆ
ದೆಹಲಿಯಿಂದ ವಾಪಸ್ಸಾದ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿಯಲ್ಲಿ ತಮ್ಮ ಆಪ್ತರ ಜೊತೆ ಗೌಪ್ತ ಸಭೆ ನಡೆಸಿದ್ದಾರೆ. ಟಿಕೆಟ್ ತಪ್ಪಿದರೆ ಮುಂದೇನು ಮಾಡಬೇಕು ಎಂಬುದು ಸೇರಿದಂತೆ ರಾಜಕೀಯ ನಡೆ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಬೆರಳೆಣಿಕೆಯಷ್ಟು ಆಪ್ತರಷ್ಟೇ ಸಭೆಯಲ್ಲಿ ಹಾಜರಿದ್ದರು.

TV24 News Desk
the authorTV24 News Desk

Leave a Reply