ಬೆಳಗಾವಿಬೆಳಗಾವಿ ನಗರರಾಜ್ಯ

ಶೆಟ್ಟರ್ ಗೋಬ್ಯಾಕ್ ಅಭಿಯಾನ ಯಶಸ್ವಿ..?

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ವ್ಯಾಪಕ ವಿರೋಧ ಕೇಳಿ ಬರುತ್ತಿದೆ. ಈ ಮಧ್ಯೆ ಗೋಬ್ಯಾಕ್ ಎಂಬ ಅಭಿಯಾನ ನಡೆಸಿರುವ ಬೆಳಗಾವಿ ಸ್ಥಳೀಯ ಕೆಲ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ರಾಜಧಾನಿಗೆ ಆಗಮಿಸಿದ್ದಾರೆ.
ಕ್ಷೇತ್ರದ ಸ್ಥಳೀಯ ಆಕಾಂಕ್ಷಿಗಳಿಗೆ ಟಿಕೆಟ್ ನೀಡುವಂತೆ ಒತ್ತಡ ಹೇರಲು
ಬಿಜೆಪಿ ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿ ರಾಜ್ಯ ನಾಯಕರಿಗೆ ಒತ್ತಡ ಹೇರಿ ಶೆಟ್ಟರ್ ಬದಲಾಗಿ ಕ್ಷೇತ್ರದ ಸ್ಥಳೀಯ ಆಕಾಂಕ್ಷಿಗಳಿಗೆ ನೀಡುವಂತೆ ಆಗ್ರಹಿಸಲಿದ್ದಾರೆ.
ಈ ಮಧ್ಯೆ ‘ಶೆಟ್ಟರ್ ಗೋ ಬ್ಯಾಕ್ ಚಳುವಳಿ’ ಯಶಸ್ವಿ ಆಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.
ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯ ಬಿಜೆಪಿಯ ಹಿರಿ-ಕಿರಿಯ ನಾಯಕರೂ ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಶೆಟ್ಟರ್ ಅವರಿಗೆ ತಲೆನೋವಾಗಿ ಪರಿಣಮಿಸಿದೆ.
ಬೆಳಗಾವಿಯ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಮಾಜಿ ಶಾಸಕ ಅನಿಲ ಬೆನಕೆ, ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ ಸೇರಿ 8ಕ್ಕೂ ಅಧಿಕ ನಾಯಕರಿಂದ ರಾಜ್ಯಮಟ್ಟದ ಬಿಜೆಪಿ ನಾಯಕರ ಭೇಟಿ ಆಗಲಿದ್ದಾರೆ. ಇತ್ತೀಚೆಗೆ ತಾವು ಜಿಲ್ಲೆಯಲ್ಲಿ ನಡೆಸಿದ್ದ ತುರ್ತು ಸಭೆಯ ಅಂಶಗಳನ್ನು ನಾಯಕರ ಗಮನಕ್ಕೆ ತರಲಿದ್ದಾರೆ.

TV24 News Desk
the authorTV24 News Desk

Leave a Reply