ಬೆಳಗಾವಿ

ಬೆಳಗಾವಿಗೆ ಮೃಣಾಳ್ ಚಿಕ್ಕೋಡಿಗೆ ಪ್ರಿಯಾಂಕಾ ..!

ಲೋಕಸಮರಕ್ಕೆ ಇಬ್ಬರ ಮಂತ್ರಿಗಳ ಮಕ್ಕಳೇ ಫಿಕ್ಸ್ ..!
ಬೆಳಗಾವಿ : ಲೋಕಸಭಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ರಾಷ್ಟ್ರೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ.
ಕಾಂಗ್ರೆಸ್ ಎರಡೂ ಕ್ಷೇತ್ರಕ್ಕೆ ಅಭ್ಯರ್ಥಿ ಹುಡುಕಾಟ ಮುಂದುವರಿಸಿದ್ದು ಬೆಳಗಾವಿಗೆ ಸಚಿವೆ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹಾಗೂ ಚಿಕ್ಕೋಡಿಗೆ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಅವರನ್ನೇ ಕಣಕ್ಕೆ ಇಳಿಸಲು ತಯಾರಿ ನಡೆದಿದೆ ಎಂದು ಹೇಳಲಾಗುತ್ತಿದೆ.
ಕೆಲ ದಿನಗಳ ಹಿಂದೆಯಷ್ಟೇ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಡಾ. ಗಿರೀಶ್ ಸೋನ್ವಾಲ್ಕರ್ ಅವರನ್ನೇ ಕಣಕ್ಕೆ ಇಳಿಸುವ ಲೆಕ್ಕಾಚಾರ ಹೊಂದಿತ್ತು. ಅಷ್ಟೇ ಅಲ್ಲದೆ ಕಾಂಗ್ರೆಸ್ ನ ಕೆಲ ಪ್ರಮುಖ‌ ಜಿಲ್ಲಾ ನಾಯಕರು ಸಭೆ ನಡೆಸಿ ಗಿರೀಶ್ರನ್ನೇ ಅಭ್ಯರ್ಥಿಯಾಗಿ ಮಾಡುವ ಕುರಿತು ಮಾತುಕತೆ ನಡೆದಿತ್ತು ಆದರೆ ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ.
ಬೆಳಗಾವಿಯಲ್ಲಿ ಸಧ್ಯ ಇಬ್ಬರು ಸಚಿವರ ಮಕ್ಕಳು ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಒಂದುವೇಳೆ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಮಕ್ಕಳು ಚುನಾವಣೆ ಇಳಿದಿದ್ದೇ ಆದರೆ ತೀವ್ರ ಪೈಪೋಟಿ ಏರ್ಪಡುವುದರಲ್ಲಿ ಎರಡು ಮಾತಿಲ್ಲ.
ಇಬ್ಬರು ಸಚಿವರಿಗೆ ತಮ್ಮ‌ ಮಕ್ಕಳನ್ನು ಗೆಲ್ಲಿಸಿಕೊಳ್ಳುವ ಪ್ರತಿಷ್ಠೆ ಎದುರಾಗುವ ಸಾಧ್ಯತೆ ಇದ್ದು ಇದಕ್ಕೆ ಬಿಜೆಪಿ ಯಾವ ಅಸ್ತ್ರ ಪ್ರಯೋಗಿಸುತ್ತದೆ ಎಂಬುದನ್ನು ಕಾದು ನೋಡಬೇಕು.

TV24 News Desk
the authorTV24 News Desk

Leave a Reply