ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನನ್ನ ಸೋಲಿಸಲು ರಣತಂತ್ರ..!
ಹೈ ವೋಲ್ಟೇಜ್ ಕಣವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಪ್ರಚಾರ ಮಾಡುವಲ್ಲಿ ಫುಲ್ ಬ್ಯುಸಿ ಆಗಿದ್ದಾರೆ.
ಕಾಂಗ್ರೆಸ್ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಕಣದಲ್ಲಿದ್ದಾರೆ. ಬೆಳಗಾವಿಯಲ್ಲಿ ಬಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನನ್ನು ಸೋಲಿಸಲು ಬಿಜೆಪಿ ಅಭ್ಯರ್ಥಿ ಜೊತೆ ಸಾಹುಕಾರ ರಮೇಶ್ ಜಾರಕಿಹೊಳಿ ಫೀಲ್ಡಿಗಿಳಿದಿದ್ದು, ಅವರು ಜಗದೀಶ ಶೆಟ್ಟರ್ ಪರ ಭರ್ಜರಿ ಪ್ರಚಾರಕ್ಕೆ ಮುಂದಾಗಿದ್ದಾರೆ.
ಗೋಕಾಕ ಸಾವಕಾರ ಸಹೋದರ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಕೂಡಿ ಈ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನನ್ನ ಸೋಲಿಸಲು ರಣತಂತ್ರ ಹೆಣೆಯುತ್ತಿದ್ದಾರಾ?
ರಮೇಶ್ ಜಾರಕಿಹೊಳಿ ಅವರು ಶೆಟ್ಟರ್ ಪರ ಗೋಕಾಕ್ ಮತ್ತು ಅರಭಾವಿ ಎರಡು ಮತಕ್ಷೇತ್ರದಲ್ಲಿ ಮತಗಳನ್ನು ಸೆಳೆಯಲು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ ಎಂದು ಕ್ಷೇತ್ರದಲ್ಲಿ ಮಾತು ಕೇಳಿಬರುತ್ತಿವೆ.
tv24plus.in > Blog > ಜಿಲ್ಲೆ > ಬೆಳಗಾವಿ > ಮೃಣಾಲ್ ಸೋಲಿಸಲು ಗೋಕಾಕ ಸಾವಕಾರ ಫೀಲ್ಡಿಗೆ ..?