ಬೆಳಗಾವಿಬೆಳಗಾವಿ ನಗರ

ಕಾನೂನು ಸುವ್ಯವಸ್ಥೆ ಕಾಪಾಡಲು ಸದಾ ಸಿದ್ಧರಾಗಿರಿ: ಐಜಿಪಿ

ಬೆಳಗಾವಿ:ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸದಾ ಸಿದ್ಧವಾಗಿರಬೇಕು. ಇದಕ್ಕೆ ದೈಹಿಕ ಸಾಮರ್ಥ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿದೆ ಎಂದು ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸ್ ಕುಮಾರ ಹೇಳಿದರು.

ಮಂಗಳವಾರ ಇಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚಾರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದರು.

TV24 News Desk
the authorTV24 News Desk

Leave a Reply