ಪಾಲಿಕೆ ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಿರವ ರಸ್ತೆ ವ್ಯಾಪಾರಿಗಳು
ಬೆಳಗಾವಿ: ನಗರದಲ್ಲಿ ಶನಿವಾರದಿಂದ ಸುರಿದ ಭಾರೀ ಮಳೆಗೆ ಬೆಳಗಾವಿ ಜನರ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಬಹುತೇಕ ರಸ್ತೆಗಳಲ್ಲಿ ನೀರು ಪ್ರವಾಹದಂತೆ ಹರಿಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ.
ಮಹಾನಗರ ಪಾಲಿಕೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಚರಂಡಿಗಳನ್ನು ಸ್ವಚ್ಛ ಗೊಳಿಸದಿರುವುದು ಮತ್ತು ಹೂಳೆತ್ತದಿರುವ ಪರಿಣಾಮ ಮಳೆ ನೀರು ಮನೆ, ಅಂಗಡಿ ಮುಗ್ಗಟ್ಟುಗಳ ಒಳಗೆ ನುಗ್ಗಿದೆ. ರಸ್ತೆಗಳ ಮೇಲೆ ನೀರು ನದಿಯ ಪ್ರವಾಹದಂತೆ ಹರಿಯುತ್ತಿದೆ. ಆದರೂ, ಪಾಲಿಕೆ ಅಧಿಕಾರಿಗಳು ಕೈಕಟ್ಟಿ ಕುಳಿತ್ತಿದ್ದಾರೆ ಎಂದು ವ್ಯಾಪಾರಿಗಳು ಹಿಡಿ ಶಾಪ ಹಾಕುತ್ತಿದ್ದಾರೆ.
ಬೆಳಗಾವಿ ಹಳೆ ಪಿಬಿ ರಸ್ತೆ, ಬಸವೇಶ್ವರದ ಬಳಿ ಪಾಲಿಕೆ ಕಾಂಪ್ಲೆಕ್ಸ್, ಗ್ಲೋಬಲ್ ಟಾಕೀಸ್ ಸೇರಿ ವಿವಿಧ ಭಾಗಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ.