ಬೆಳಗಾವಿ : ಸವದತ್ತಿ ಶಾಸಕ, ಉಪಸಭಾಪತಿ ಆನಂದ್ ಮಾಮನಿ ವಿಧಿವಶವಾದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಕಿತ್ತೂರು ಉತ್ಸವಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಇಂದು ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಅಕ್ಟೋಬರ್ 24,25 ಮತ್ತು 26 ರಂದು ಕಾರ್ಯಕ್ರಮಗಳು ನಡೆಯಲಿವೆ.