ಬೆಳಗಾವಿ: ಕನ್ನಡ ನಾಮಫಲಕ ಜಾಗೃತಿ ಆಂದೋಲನದ ಭಾಗವಾಗಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಮಹಾನಗರ ಪಾಲಿಕೆ ವರೆಗೆ ಕರವೇ ಜಿಲ್ಲಾಧ್ಯಕ್ಷ. ದೀಪಕ ಗುಡಗನಟ್ಟಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಅಳವಡಿಕೆಗೆ ಒತ್ತಾಯಿಸಿದ ಕರವೇ ಕಾರ್ಯಕರ್ತರು ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಸಿದರು
ರಾಜ್ಯ ಸರ್ಕಾರ, ನಾಮಫಲಕ ಮತ್ತು ಜಾಹಿರಾತು ಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಆದೇಶ ಹೊರಡಿಸಿದೆ. ಆದರೆ ಬೆಳಗಾವಿ ಮಹಾನಗರದಲ್ಲಿ ಮತ್ತು ಜಿಲ್ಲೆಯಾದ್ಯಂತ ಸರ್ಕಾರದ ಆದೇಶ ಪಾಲನೆ ಆಗುತ್ತಿಲ್ಲ. ಬೆಳಗಾವಿ ಮಹಾನಗರದಲ್ಲಿ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಲಾಗುತ್ತಿದೆ. ಆದರೆ ಬೆಳಗಾವಿ ಮಹಾನಗರ ಸೇರಿದಂತೆ ಜಿಲ್ಲೆಯಾದ್ಯಂತ, ಅನ್ಯ ಭಾಷೆಯ ಜಾಹಿರಾತು ಫಲಕಗಳು ರಾರಾಜಿಸುತ್ತಿವೆ.
ಬೆಳಗಾವಿ ಮಹಾನಗರದಲ್ಲಿ ರಾಜಕೀಯ ನಾಯಕರು ಮತ್ತು ಜನ ಪ್ರತಿನಿಧಿಗಳು ಅನ್ಯಭಾಷೆಯಲ್ಲಿ ಶುಭಾಶಯಗಳು ಕೋರಿ, ಬ್ಯಾನರ್ ಮತ್ತು ಕಟೌಟ್ಗಳನ್ನು ಹಚ್ಚುವ ಮೂಲಕ ಸರ್ಕಾರದ ಆದೇಶವನ್ನು ರಾಜಕೀಯ ನಾಯಕರೇ ಉಲ್ಲಂಘನೆ ಮಾಡುತ್ತಿದ್ದು, ಅಧಿಕಾರಿಗಳು ರಾಜಕೀಯ ನಾಯಕರ ಒತ್ತಡಕ್ಕೆ ಮಣಿದು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ.
ಕನ್ನಡ ನಾಮಫಲಕ ಕಡ್ಡಾಯದ ವಿಚಾರದಲ್ಲಿ ಬೆಳಗಾವಿ ಜಿಲ್ಲಾಡಳಿತ ಯಾವುದೇ ಮುಲಾಜಿಲ್ಲದೇ ಅನ್ಯ ಭಾಷೆಯ ನಾಮಫಲಕ, ಜಾಹಿರಾತು ಫಲಕ ಮತ್ತು ಅನ್ಯ ಭಾಷೆಯ ಕಟೌಟ್ ಬ್ಯಾನರ್ಗಳನ್ನು ತೆಗೆದು ಹಾಕುವ ಕಾರ್ಯಾಚರಣೆ ಆರಂಭಿಸಬೇಕು. ಈ ವಿಚಾರದಲ್ಲಿ ಮಹಾನಗರ ಪಾಲಿಕೆ ನಿರ್ಲಕ್ಷ್ಯ ಮಾಡಿದರೆ, ಕರವೇ ಕಾರ್ಯಕರ್ತರು ಅನ್ಯಭಾಷೆಯ ಯಾವುದೇ ಫಲಕಗಳನ್ನು ಕಿತ್ತೆಸೆಯುವ ಆಂದೋಲನ ಮಾಡುತ್ತೇವೆ ಎಂಬ ವಿಷಯವನ್ನು ತಿಳಿಸುತ್ತಾ. ಮುಂದಿನ ದಿನಗಳಲ್ಲಿ ಅನ್ಯಭಾಷೆಗಳ ಕಟೌಟ್ ಬ್ಯಾನರ್ಗಳನ್ನು ಅಳವಡಿಸಲು ಅನುಮತಿ ನೀಡದೇ ಸರ್ಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕು, ಕಾನೂನು ಎಲ್ಲರಿಗೂ ಒಂದೇ, ಕನ್ನಡ ಕಡ್ಡಾಯದ ವಿಚಾರದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವಾರದೊಳಗಾಗಿ ಕ್ರಮ ಕೈಗೊಳ್ಳದಿದ್ದರೆ, ಸರ್ಕಾರದ ಆದೇಶ ಪಾಲಿಸಲು ಕರವೇ ಕಾರ್ಯಕರ್ತರೇ ಅನ್ಯ ಭಾಷೆಯ ನಾಮಫಲಕಗಳನ್ನು ಕಿತ್ತೆಸುವ ಕೆಲಸ ಮಾಡುತ್ತಾರೆ ಎಂದು ಮನವಿ ಸಲ್ಲಿಸಿದರು
tv24plus.in > Blog > ಜಿಲ್ಲೆ > ಬೆಳಗಾವಿ > ಕನ್ನಡಕ್ಕೆ ನಿರ್ಲಕ್ಷ ಬೀದಿಗಿಳಿದ ಕರವೇ