ತಿಂಗಳ ಅಂತ್ಯದಲ್ಲಿ ಹೊಸ ಅಧ್ಯಕ್ಷರ ಆಯ್ಕೆ..!
ಬೆಳಗಾವಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ಇನ್ನೂ ಒಂದು ವರ್ಷಗಳ ಕಾಲ ಅಧಿಕಾರಾವಧಿ ಇರುವಾಗಲೇ ದಿಢೀರ್ ರಾಜೀನಾಮೆ ನೀಡುವ ಮೂಲಕ ಮಹತ್ವದ ಬೆಳವಣಿಗೆಗೆ ಕಾರಣವಾಗಿದೆ.
14 ಸದಸ್ಯರು ಗುರುವಾರವಷ್ಟೇ ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಿದ್ದರು. ಬಿಡಿಸಿಸಿ ಅಧ್ಯಕ್ಷ ರಮೇಶ ಕತ್ತಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಅವಿಶ್ವಾಸ ಗೊತ್ತುವಳಿ ಮಂಡಿಸಲೂ ನಿರ್ಧರಿಸಿದ್ದರು ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಅಕ್ಟೋಬರ್ ಅಂತ್ಯದೊಳಗೆ, ಡಿಸಿಸಿ ಬ್ಯಾಂಕಿಗೆ ಹೊಸ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುತ್ತೇವೆ. ನಾಯಕರಾದ ಪ್ರಭಾಕರ ಕೋರೆ, ಸತೀಶ ಜಾರಕಿಹೊಳಿ, ಲಕ್ಷ್ಮಣ ಸವದಿ, ರಮೇಶ ಜಾರಕಿಹೊಳಿ ಮತ್ತು ರಮೇಶ ಕತ್ತಿ ನೇತೃತ್ವದಲ್ಲೇ ಆ ಪ್ರಕ್ರಿಯೆ ನಡೆಯಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ
tv24plus.in > Blog > ಜಿಲ್ಲೆ > ಬೆಳಗಾವಿ > ಡಿಸಿಸಿ ಬ್ಯಾಂಕ ರಾಜಕೀಯ ಗರಂ ..!