ಬೆಳಗಾವಿ: ಕರವೇ ಬೆಳಗಾವಿ ಜಿಲ್ಲಾ ಸಂಚಾಲಕರಾದ ಶಿವಾನಂದ ಕೋಲಕಾರ, ಬೈಲಹೊಂಗಲ ತಾಲ್ಲೂಕು ಅಧ್ಯಕ್ಷರಾದ ರಾಜು ಬೋಳಣ್ಣವರ, ಸವದತ್ತಿ ತಾಲ್ಲೂಕು ಅಧ್ಯಕ್ಷರಾದ ಉದಯ ಚಿಕ್ಕಣ್ಣವರ, ಹಾಗೂ ಚಿಕ್ಕೋಡಿ ತಾಲ್ಲೂಕು ಅಧ್ಯಕ್ಷರಾದ ನಾಗೇಶ ಮಾಳಿರವರುಗಳ ವಿಚಾರವಾಗಿ ಬೆಳಗಾವಿ ಜಿಲ್ಲಾ ಸಮಿತಿಯು ನೀಡಿರುವ ವರದಿಯನ್ನು ಪರಿಗಣಿಸಿ ಸೇರಿದಂತೆ ಜಿಲ್ಲಾ ಸಮಿತಿಯ ನಾಲ್ಕು ಪದಾಧಿಕಾರಿಗಳನ್ನು ಬಣದಿಂದ ಉಚ್ಛಾಟಿಸಲಾಗಿದೆ.ಇಂದು
ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕನ್ನಡ-ಕನ್ನಡಿಗ-ಕರ್ನಾಟಕದ ಸಾರ್ವಭೌಮತೆಯನ್ನು ಕಾಪಾಡಲು ಕಳೆದ 25 ವರ್ಷಗಳಿಂದ ದುಡಿಯುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕದ ಸಿದ್ದಾಂತದಡಿ ಕಾರ್ಯ ನಿರ್ವಹಿಸದೇ ಆದೇಶಗಳನ್ನು ಉಲ್ಲಂಘಿಸಿರುವ ಬೆಳಗಾವಿ ಜಿಲ್ಲಾ ಸಂಚಾಲಕರಾದ ಶಿವಾನಂದ ಕೋಲಕಾರ, ಬೈಲಹೊಂಗಲ ತಾಲ್ಲೂಕು ಅಧ್ಯಕ್ಷರಾದ ರಾಜು ಬೋಳಣ್ಣವರ, ಸವದತ್ತಿ ತಾಲ್ಲೂಕು ಅಧ್ಯಕ್ಷರಾದ ಉದಯ ಚಿಕ್ಕಣ್ಣವರ, ಹಾಗೂ ಚಿಕ್ಕೋಡಿ ತಾಲ್ಲೂಕು ಅಧ್ಯಕ್ಷರಾದ ನಾಗೇಶ ಮಾಳಿರವರುಗಳ ವಿಚಾರವಾಗಿ ಬೆಳಗಾವಿ ಜಿಲ್ಲಾ ಸಮಿತಿಯು ನೀಡಿರುವ ವರದಿಯನ್ನು ಪರಿಗಣಿಸಿ ಇವರುಗಳನ್ನು ಸಂಘಟನೆಯಿಂದ ಉಚ್ಛಾಟಿಸಲಾಗಿದೆ.. ಉಚ್ಛಾಟಿತರಿಗೂ ವೇದಿಕೆಗೂ ಇನ್ನು ಮುಂದೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟ.ಪಡಿಸಿದ್ದಾರೆ.
tv24plus.in > Blog > ಜಿಲ್ಲೆ > ಬೆಳಗಾವಿ > ಬೆಳಗಾವಿ ಕರವೇ ಪದಾಧಿಕಾರಿಗಳ ಉಚ್ಛಾಟನೆ