ಧಾರವಾಡ

ಮುಂದಿನ ಚುನಾವಣೆಯಲ್ಲಿ ಮುತಾಲಿಕ ಸ್ಪರ್ಧೆಗೆ  ಸಿದ್ದತೆ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಯಲು  ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಧಾರವಾಡದಲ್ಲಿ ಪತ್ರಕರ್ತರೊಂದಿಗೆ  ಮಾತನಾಡಿದ ಅವರು ವಿಷಯವನ್ನು ಖಚಿತಪಡಿಸಿದ್ದಾರೆ.

ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯ ಯಾವುದಾದರು ಒಂದು ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದ್ದು, ಇದಕ್ಕಾಗಿ ಈಗಾಗಲೇ ಪೂರ್ವ ಸಿದ್ಧತೆಗಳು ನಡೆಯುತ್ತಿದೆ ಎಂದು ಹೇಳಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹಲವು ಕ್ಷೇತ್ರಗಳ ಅಭಿಮಾನಿಗಳು ಮನವಿ ಮಾಡುತ್ತಿದ್ದು, ಡಿಸೆಂಬರ್ ಮೊದಲ ವಾರದ ಹೊತ್ತಿಗೆ ಯಾವ ಕ್ಷೇತ್ರ ಎಂಬುದನ್ನು ಬಹಿರಂಗಪಡಿಸುತ್ತೇನೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

 

 

 

TV24 News Desk
the authorTV24 News Desk

Leave a Reply